Featured

ಮಂಗಳೂರು: ‘ಮರವೂರು ಸೇತುವೆ ದುರಸ್ತಿ ಅಥವಾ ಪುನರ್ ನಿರ್ಮಾಣ ಶೀಘ್ರದಲ್ಲೇ ನಿರ್ಧಾರ’ : ಸಚಿವ ಕೋಟ -Vishwanews24

ಮಂಗಳೂರು: ‘ಮರವೂರು ಸೇತುವೆ ದುರಸ್ತಿ ಅಥವಾ ಪುನರ್ ನಿರ್ಮಾಣ ಶೀಘ್ರದಲ್ಲೇ ನಿರ್ಧಾರ’ : ಸಚಿವ ಕೋಟ -Vishwanews24

ಮಂಗಳೂರು : “ಮರವೂರು ಸೇತುವೆಯ ಮೇಲೆ ಹಾದು ಹೋಗುವ ರಸ್ತೆಯು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಈ ಸೇತುವೆಯ ಪುನರ್ ನಿರ್ಮಾಣ ಮಾಡಬೇಕೆ ಅಥವಾ ದುರಸ್ತಿ ಕೈಗೊಳ್ಳಬೇಕೆ ಎನ್ನುವುದಕ್ಕೆ ತಜ್ಞರನ್ನೊಳಗೊಂಡ ಸಮಿತಿಯು ಪರಿಶೀಲಿಸಿ ಇನ್ನೆರೆಡು ದಿನದೊಳಗೆ ವರದಿ ನೀಡಲಿದೆ. ವರದಿಯನ್ನಾಧರಿಸಿ, ದುರಸ್ತಿ ಅಥವಾ ಪುನರ್ ನಿರ್ಮಾಣದ ಬಗ್ಗೆ ಅಗತ್ಯವಿರುವ ಅನುದಾನವನ್ನು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು” ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮರವೂರು ಸೇತುವೆ ಬಿರುಕು ಕಾಣಿಸಿಕೊಂಡಿರುವ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದ ಅವರು, “ಅತ್ರಾಡಿ ರಾಷ್ಟ್ರೀಯ ಹೆದ್ದಾರಿ-67 ರಸ್ತೆಯಲ್ಲಿರುವ ಮರವೂರು ಸೇತುವೆಯ ಪಿಲ್ಲರ್ 8 ಜೂನ್ 14 ರ ರಾತ್ರಿಯ ಸಮಯದಲ್ಲಿ ಕುಸಿದ ಹಿನ್ನೆಲೆ ಸೇತುವೆಯಲ್ಲಿ ಬಿರುಕು ಕಂಡಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ ಸದರಿ ಸೇತುವೆಯ ಮೇಲೆ ವಾಹನ ಸಂಚಾರ ಯೋಗ್ಯವಲ್ಲದ ಕಾರಣ ಸ್ಥಗಿತಗೊಳಿಸಲಾಗಿದೆ” ಎಂದರು.

“ಈ ರಸ್ತೆಯ ಸೇತುವೆಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು 50 ಕೋಟಿ ರೂ. ಮಂಜೂರಾತಿಯಾಗಿದ್ದು, ಹಾಲಿ ಸೇತುವೆಯ ಪಕ್ಕದಲ್ಲಿ ಹೊಸ ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಸೇತುವೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಕೈಗೊಂಡು ಮುಂಬರುವ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು.

“ನಾಲ್ಕು ಪಥದ ರಸ್ತೆಯ ಟೆಂಡರ್‌‌ನಲ್ಲಿ ಹಳೆ ಸೇತುವೆಯನ್ನು ದುರಸ್ಥಿಪಡಿಸಲು ಯೋಜನೆಯನ್ನು ರೂಪಿಸಲಾಯಿತು. ಸೇತುವೆಯನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ಸೇತುವೆ ತಪಾಸಣಾ ತಂಡ ಪ್ಲಾನಿಂಗ್ ಆ್ಯಂಡ್ ರೋಡ್ ಆಸ್ಸೆಟ್ ಮ್ಯಾನೇಜ್‍ಮೆಂಟ್ ಸೆಂಟರ್ ವತಿಯಿಂದ ಈಗಾಗಲೇ ಪರಿಶೀಲಿಸಿರುತ್ತಾರೆ. ಹಳೆಯ ಸೇತುವೆ ದುರಸ್ತಿಗೆ 3 ತಿಂಗಳುಗಳ ಕಾಲ ವಾಹನ ಸಂಚಾರ ಸ್ಥಗಿತಗೊಳಿಸಬೇಕಾಗಿರುವುದರಿಂದ ಹೊಸ ಸೇತುವೆ ನಿರ್ಮಾಣಗೊಂಡ ನಂತರವೇ ಹಳೇ ಸೇತುವೆಯ ದುರಸ್ತಿ ಕಾರ್ಯಕೈಗೊಳ್ಳಲು ಉದ್ದೇಶಿಸಲಾಗಿತ್ತು, ಈಗ ತಜ್ಞರ ವರದಿಯನ್ನು ಆಧರಿಸಿ ಕ್ರಮ ಕೈಗೊಳ್ಳಲಾಗುವುದು” ಎಂದರು.

“ಸೇತುವೆ ಕುಸಿದು ವಾಹನ ಸಂಚಾರ ನಿರ್ಬಂಧಿಸಿದ ಹಿನ್ನೆಲೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರ್ಯಾಯ ಮಾರ್ಗವಾಗಿ ಉಡುಪಿ ಕಡೆಯಿಂದ ಮುಲ್ಕಿ-ಮೂರುಕಾವೇರಿ-ಕಟೀಲು ಮುಖಾಂತರ, ಬಜ್ಪೆಗೆ ಹಾಗೂ ಮಂಗಳೂರು ಕಡೆಯಿಂದ ಮರವೂರು ದ್ವಾರದಿಂದ ಪೊರ್ಕೋಡಿ-ಜೋಕಟ್ಟೆ – ಬೈಕಂಪಾಡಿ ರಸ್ತೆ ಮತ್ತು ಕೈಕಂಬ – ಅದ್ಯಪಾಡಿ ರಸ್ತೆ ಅಥವಾ ಕೈಕಂಬ – ಬಜಪೆ ರಸ್ತೆ ಮಾರ್ಗವಾಗಿ, ಸುರತ್ಕಲ್ – ಮಂಗಳಪೇಟೆ -ಬಜಪೆ ಮಾರ್ಗವಾಗಿ ಸಂಚರಿಸಬಹುದಾಗಿರುತ್ತದೆ” ಎಂದರು.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago