Featured

ಮಂಗಳೂರು : ಮರವೂರು ಸೇತುವೆ ಹಾನಿಗೊಳಗಾಗಲು ಜಿಲ್ಲಾಡಳಿತದ ನಿರ್ಲಕ್ಷ್ಯ ಹಾಗೂ ಮರಳು ಮಾಫಿಯಾವೇ ಪ್ರಮುಖ ಕಾರಣ : ಅಭಯಚಂದ್ರ ಜೈನ್  -Vishwanews24

ಮಂಗಳೂರು : ಮರವೂರು ಸೇತುವೆ ಹಾನಿಗೊಳಗಾಗಲು ಜಿಲ್ಲಾಡಳಿತದ ನಿರ್ಲಕ್ಷ್ಯ ಹಾಗೂ ಮರಳು ಮಾಫಿಯಾವೇ ಪ್ರಮುಖ ಕಾರಣ : ಅಭಯಚಂದ್ರ ಜೈನ್  -Vishwanews24

ನಾನು ಶಾಸಕನಾಗಿದ್ದಾಗ ಇದಕ್ಕೆ ಅವಕಾಶ ನೀಡಿರಲಿಲ್ಲ..

ಮಂಗಳೂರು,: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಮರವೂರು ಸೇತುವೆ ಹಾನಿಗೊಳಗಾಗಲು ಜಿಲ್ಲಾಡಳಿತದ ನಿರ್ಲಕ್ಷ್ಯ ಹಾಗೂ ಮರಳು ಮಾಫಿಯಾವೇ ಪ್ರಮುಖ ಕಾರಣ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಸಿಬಿ ಮೂಲಕ ಸೇತುವೆ ಸುತ್ತಮುತ್ತ ಹೂಳೆತ್ತುವ ನೆಪದಲ್ಲಿ ಇಲ್ಲಿ ಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿದೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಮೌನ ವಹಿಸಿರುವುದು ಈ ದುರಂತಕ್ಕೆ ಕಾರಣ ಎಂದು ಆರೋಪಿಸಿದರು.

ಪರ್ಯಾಯ ಸೇತುವೆ ನಿರ್ಮಾಣಕ್ಕೆ ಮುಂದಾಗುವ ಮೊದಲು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮ ವಹಿಸಬೇಕಿತ್ತು. ಹಿಂದೆಲ್ಲಾ ಜಿಲ್ಲಾಧಿಕಾರಿಗಳು ತಾಲೂಕು ಕೇಂದ್ರಗಳ ಅತಿಥಿ ಗೃಹಗಳಲ್ಲಿ ಶಿಬಿರ ನಡೆಸಿ ಸ್ಥಳೀಯ ಸಮಸ್ಯೆಗಳನ್ನು ಅರಿತುಕೊಳ್ಳುತ್ತಿದ್ದರು. ಅಂತಹ ವ್ಯವಸ್ಥೆ ಈಗ ಇಲ್ಲ ಎಂದು ಹೇಳಿದ ಅಭಯಚಂದ್ರ ಜೈನ್, ಇದೀಗ ಮರವೂರು ಸೇತುವೆಯ ಜತೆಗೆ ಬಹುಗ್ರಾಮ ಕುಡಿಯುವ ನೀರಿಗಾಗಿ ಹಿಂದಿನ ಶಾಸಕರಾದ ವಿಜಯ ಕುಮಾರ್ ಶೆಟ್ಟಿಯವರ ಮುತುವರ್ಜಿಯಲ್ಲಿ ನಿರ್ಮಿಸಲಾದ ಕಿಂಡಿ ಅಣೆಕಟ್ಟಿಗೂ ಅಪಾಯವನ್ನು ತಂದೊಡ್ಡಿದೆ. ಜತೆಗೆ ಕೊಂಕಣ ರೈಲ್ವೆಯ ಸೇತುವೆಯೂ ಇಲ್ಲಿ ಹಾದು ಹೋಗುತ್ತಿದ್ದು, ಅದಕ್ಕೂ ಹಾನಿಯಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ರಾಜಕಾರಣಿಗಳ ಕೃಪಕಟಾಕ್ಷದಡಿಯಲ್ಲಿ ನಡೆಯುವ ಮರುಳು ಮಾಫಿಯಾದಿಂದ ಇಂತಹ ಆತಂಕದ ಪರಿಸ್ಥಿತಿ ನಿರ್ಮಾಣವಾಗಿದ್ದು, ಗಣಿಗಾರಿಕೆ ಇಲಾಖೆಯ ಭ್ರಷ್ಟ ಅಧಿಕಾರಿಗಳೂ ಇದಕ್ಕೆ ಕಾರಣ. ನಾನು ಶಾಸಕನಾಗಿದ್ದಾಗ ಇದಕ್ಕೆ ಅವಕಾಶ ನೀಡಿರಲಿಲ್ಲ ಎಂದವರು ಹೇಳಿದರು.

ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಮಿಥುನ್ ರೈ ಮಾತನಾಡಿ, ಡ್ರೆಜ್ಜಿಂಗ್ ನೆಪದಲ್ಲಿ ಇಲ್ಲಿ ಪ್ರತಿನಿತ್ಯ ಮರಳುಗಾರಿಕೆ ನಡೆಯುತ್ತಿರುವುದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಿದರು.

ಹೊಸ ಸೇತುವೆ ಕಾಮಗಾರಿ ಸಮರೋಪಾದಿಯಲ್ಲಿ ಮುಗಿಸಬೇಕು. ಹಳೆ ಸೇತುವೆ ಕುಸಿಯಲು ಕಾರಣದ ಬಗ್ಗೆ ನಿಷ್ಪಕ್ಷಪಾತವಾದ ತನಿಖೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆಯಬೇಕು ಎಂದು ಅವರು ಒತ್ತಾಯಿಸಿದರು.

ರೈಲ್ವೇ ಮಾರ್ಗ ಹಾಗೂ ಸೇತುವೆ ನಡುವೆ ಜೆಸಿಬಿಗಳನ್ನು ಉಪಯೋಗಿಸಿ ಕೆಲಸ ನಡೆಯುತ್ತಿದ್ದ ಸಂದರ್ಭ ಸ್ಥಳೀಯರು ವಿಚಾರಿಸಿದಾಗ ಹೂಳೆತ್ತುವ ಕೆಲಸ ಎಂದು ಗಣಿಗಾರಿಕೆ ಅಧಿಕಾರಿಗಳು ತಿಳಿಸಿದ್ದರು. ಆದರೆ ಹೂಳೆತ್ತುವ ಮಣ್ಣನ್ನು ಅಲ್ಲೇ ಸಮೀಪದ ಹೊಂಡಕ್ಕೆ ಹಾಕುವಂತೆ ಸ್ಥಳೀಯರು ಮನವಿ ಮಾಡಿದ್ದೆವು. ಆದರೆ ಅಲ್ಲಿ ಹೂಳೆತ್ತಿದ್ದ ಮಣ್ಣು ಹಾಕಲಾಗಿಲ್ಲ. ಬದಲಾಗಿ ಸುಮಾರು 700 ಲೋಡ್‌ನಷ್ಟು ಮರುಳು ಶೇಖರಣೆಯಾಗಿದೆ ಎಂದು ಸ್ಥಳೀಯರಾದ ಬಾಬು ಶೆಟ್ಟಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ವಿನಯರಾಜ್, ಶಾಲೆಟ್ ಪಿಂಟೋ, ಅನಿಲ್ ಕುಮಾರ್, ಮೆರಿಲ್ ರೇಗೋ, ಸವದ್ ಸುಳ್ಯ, ಸಿರಾಜ್, ಹನೀಫ್ ಉಪಸ್ಥಿತರಿದ್ದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

7 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

8 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago