ಮಂಗಳೂರು : ಮರುವಾಯಿ ಪದಾರ್ಥ ಸೇವಿಸಿ ಹಲವರು ಅಸ್ವಸ್ಥ ; ಆಸ್ಪತ್ರೆಗೆ ದಾಖಲು – Vishwanews24
ಮಂಗಳೂರು : ಮರುವಾಯಿ ಪದಾರ್ಥ ಸೇವಿಸಿ ಹಲವರು ಅಸ್ವಸ್ಥ ; ಆಸ್ಪತ್ರೆಗೆ ದಾಖಲು – Vishwanews24
ಮಂಗಳೂರು: ಚಿಪ್ಪು ಮೀನು ಅಥವಾ ಮರುವಾಯಿ ಸೇವಿಸಿ ಹಲವರು ಅಸ್ವಸ್ಥಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಜಪೆಯ ಕುಪ್ಪೆಪದವು ಪರಿಸರದಲ್ಲಿ ಶನಿವಾರ ನಡೆದಿದೆ.
ತುಳುವಿನಲ್ಲಿ ಮರುವಾಯಿ ಎಂದು ಕರೆಯಲ್ಪಡುವ ಚಿಪ್ಪು ಮೀನು ಖರೀದಿಸಿ ಪದಾರ್ಥ ಮಾಡಿ ತಿಂದ ಮೇಲೆ ಕೆಲವರು ಅಸ್ವಸ್ಥಗೊಂಡಿದ್ದು, ಕೋವಿಂಡ್ ಭೀತಿಯಿಂದ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳದೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಮಂಗಳೂರು : ಉಡುಗೊರೆ ಕೊಡಿಸುವುದಾಗಿ ಭರವಸೆ : 2.92 ಲಕ್ಷ ರೂಪಾಯಿ ವಂಚಿಸಿ ಪರಾರಿ – Vishwanews24
ತೀವ್ರ ಅಸ್ವಸ್ಥಗೊಂಡ ಒಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಮರುವಾಯಿ ತಿಂದ ಜನರಲ್ಲಿ ತಲೆ ಸುತ್ತಲಾರಂಭಿಸಿದ್ದು, ಕಣ್ಣು ಮಂಜಾಗಿ, ವಾಂತಿಯೂ ಆಗಿದೆ ಎಂದು ಕೆಲವರು ತಿಳಿಸಿದ್ದಾರೆ.
ಕುಪ್ಪೆಪದವು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಿರಣ್ ಮಾತನಾಡಿ, ಪುಡ್ ಪಾಯಿಸನ್ ಆಗಿರುವ ಬಗ್ಗೆ ಕೆಲವರು ಮಾಹಿತಿ ನೀಡಿದ್ದಾರೆ.
ಚಿಪ್ಪು ಮೀನಿನ ಪದಾರ್ಥ ಸೇವನೆಯಿಂದ ಅಸ್ವಸ್ಥಗೊಳ್ಳಲು ನಿರ್ದಿಷ್ಟ ಕಾರಣ ಏನು ಎಂದು ಸ್ಪಷ್ಟವಾಗಿಲ್ಲವಾದರೂ ಮೀನು ಕೆಡದಂತೆ ಸಂರಕ್ಷಿಸಲು ಬಳಸುವ ರಾಸಾಯನಿಕದಿಂದಾಗಿ ಅಸ್ವಸ್ಥತೆ ಕಂಡು ಬಂದಿರಬಹುದೆಂದು ಅಸ್ವಸ್ಥಗೊಂಡಿದ್ದ ಕೆಲವರು ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ : ಕೊಡವೂರು ಗೋಶಾಲೆಯ ನೂತನ ಕಟ್ಟಡಕ್ಕೆ ಪೇಜಾವರ ಶ್ರೀಗಳಿಂದ ಶಿಲಾನ್ಯಾಸ – Vishwanews24
