ಮಂಗಳೂರು: ಚಿಪ್ಪು ಮೀನು ಅಥವಾ ಮರುವಾಯಿ ಸೇವಿಸಿ ಹಲವರು ಅಸ್ವಸ್ಥಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ಬಜಪೆಯ ಕುಪ್ಪೆಪದವು ಪರಿಸರದಲ್ಲಿ ಶನಿವಾರ ನಡೆದಿದೆ.
ತುಳುವಿನಲ್ಲಿ ಮರುವಾಯಿ ಎಂದು ಕರೆಯಲ್ಪಡುವ ಚಿಪ್ಪು ಮೀನು ಖರೀದಿಸಿ ಪದಾರ್ಥ ಮಾಡಿ ತಿಂದ ಮೇಲೆ ಕೆಲವರು ಅಸ್ವಸ್ಥಗೊಂಡಿದ್ದು, ಕೋವಿಂಡ್ ಭೀತಿಯಿಂದ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳದೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ತೀವ್ರ ಅಸ್ವಸ್ಥಗೊಂಡ ಒಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಮರುವಾಯಿ ತಿಂದ ಜನರಲ್ಲಿ ತಲೆ ಸುತ್ತಲಾರಂಭಿಸಿದ್ದು, ಕಣ್ಣು ಮಂಜಾಗಿ, ವಾಂತಿಯೂ ಆಗಿದೆ ಎಂದು ಕೆಲವರು ತಿಳಿಸಿದ್ದಾರೆ.
ಕುಪ್ಪೆಪದವು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಿರಣ್ ಮಾತನಾಡಿ, ಪುಡ್ ಪಾಯಿಸನ್ ಆಗಿರುವ ಬಗ್ಗೆ ಕೆಲವರು ಮಾಹಿತಿ ನೀಡಿದ್ದಾರೆ.
ಚಿಪ್ಪು ಮೀನಿನ ಪದಾರ್ಥ ಸೇವನೆಯಿಂದ ಅಸ್ವಸ್ಥಗೊಳ್ಳಲು ನಿರ್ದಿಷ್ಟ ಕಾರಣ ಏನು ಎಂದು ಸ್ಪಷ್ಟವಾಗಿಲ್ಲವಾದರೂ ಮೀನು ಕೆಡದಂತೆ ಸಂರಕ್ಷಿಸಲು ಬಳಸುವ ರಾಸಾಯನಿಕದಿಂದಾಗಿ ಅಸ್ವಸ್ಥತೆ ಕಂಡು ಬಂದಿರಬಹುದೆಂದು ಅಸ್ವಸ್ಥಗೊಂಡಿದ್ದ ಕೆಲವರು ಅಭಿಪ್ರಾಯಪಟ್ಟಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…