Featured

ಮಂಗಳೂರು : ಮಳಲಿ ದರ್ಗಾ ವಿವಾದ – ಅಷ್ಟಮಂಗಲ ಪ್ರಶ್ನೆಗೆ ಮುಂದಾದ ವಿಹೆಚ್‌ಪಿ – Vishwaews24

ಧಾರ್ಮಿಕ ಸಾಕ್ಷ್ಯ ಪತ್ತೆ ಬಳಿಕ ಐತಿಹಾಸಿಕ ಪುರಾವೆ ಸಂಗ್ರಹಿಸಲು ಯೋಜಿಸಿದ ಹಿಂದೂ ಪರ ಸಂಘಟನೆಗಳು

ಮಂಗಳೂರು: ಮಂಡ್ಯದ ಜಾಮೀಯಾ ಮಸೀದಿ ವಿವಾದದ ಬೆನ್ನಲ್ಲೇ ಮಂಗಳೂರಿನಲ್ಲೂ ಮಸೀದಿಯ ಸತ್ಯಾಸತ್ಯತೆಯ ವಿವಾದವೊಂದು ಭುಗಿಲೇಳುವ ಸಾಧ್ಯತೆ ದಟ್ಟವಾಗಿದೆ. ಹಿಂದೂ ಪರ ಸಂಘಟನೆಗಳು ಅಷ್ಟಮಂಗಲ ಪ್ರಶ್ನಾ ಚಿಂತನೆ ಮೂಲಕ ಈ ಮಸೀದಿಯ ರಹಸ್ಯ ಪತ್ತೆಗೆ ಮುಂದಾಗಿದೆ. ಧಾರ್ಮಿಕ ಸಾಕ್ಷ್ಯ ಪತ್ತೆ ಬಳಿಕ ಐತಿಹಾಸಿಕ ಪುರಾವೆ ಸಂಗ್ರಹಿಸಲು ಯೋಜಿಸಿದೆ.

ಮಂಗಳೂರು ನಗರ ಹೊರವಲಯದ ಗಂಜಿಮಠದ ಮಳಳಿಯಲ್ಲಿರುವ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾದಲ್ಲಿ ಇತ್ತೀಚೆಗೆ ದೇವಸ್ಥಾನ ಮಾದರಿಯ ಗುಡಿ ಪತ್ತೆಯಾಗಿತ್ತು. ಈ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಮಸೀದಿಯ ರಹಸ್ಯ ಪತ್ತೆಗೆ ವಿಶ್ವ ಹಿಂದೂ ಪರಿಷತ್ ಮುಂದಾಗಿದೆ. ಅಷ್ಟಮಂಗಲ ಪ್ರಶ್ನೆ ನಡೆಸುವ ನಿರ್ಧಾರವನ್ನು ಮಾಡಿದೆ.

ವಿಶ್ವ ಹಿಂದೂ ಪರಿಷತ್ ಕೇರಳದ ಪ್ರಖ್ಯಾತ ಪುದುವಾಳ್‌ಗಳನ್ನು ಕರೆಸಲಿದ್ದು, ಅವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆಗೆ ಚಿಂತನೆ ನಡೆಸಿದೆ. ಮಸೀದಿ ಜಾಗದಲ್ಲಿ ದೇವಾಲಯ ಇತ್ತು ಎಂಬುದು ಹಿಂದೂ ಸಂಘಟನೆಗಳ ವಾದವಾಗಿದ್ದು, ಇದನ್ನು ಅಷ್ಟಮಂಗಲ ಪ್ರಶ್ನೆ ಮೂಲಕ ರಹಸ್ಯ ಪತ್ತೆಗಿಳಿದು, ಧಾರ್ಮಿಕ ಸಾಕ್ಷ್ಯ ಪತ್ತೆ ಬಳಿಕ ಐತಿಹಾಸಿಕ ಪುರಾವೆ ಸಂಗ್ರಹಿಸಲು ಪ್ಲಾನ್ ಮಾಡಿದೆ. ಅಷ್ಟಮಂಗಲ ಪ್ರಶ್ನೆ ಬಳಿಕ ದಾಖಲೆ ಸಹಿತ ಕಾನೂನು ಹೋರಾಟಕ್ಕೆ ಯೋಜನೆ ರೂಪಿಸಿದೆ.

ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ದೇವಸ್ಥಾನ ಮಾದರಿಯ ಗುಡಿ ಪತ್ತೆಯಾಗಿತ್ತು. ದರ್ಗಾದ ಹಿಂಭಾಗದಲ್ಲಿ ದೇವಸ್ಥಾನದ ಕಲಶ, ತೋಮರ, ಕಂಬಗಳ ಮಾದರಿ ಸಿಕ್ಕಿತ್ತು. ವಿಹೆಚ್‌ಪಿ ಸ್ಥಳಕ್ಕೆ ಭೇಟಿ ನೀಡಿ, ನವೀಕರಣ ಕಾಮಗಾರಿ ಸ್ಥಗಿತಕ್ಕೆ ಕೋರ್ಟ್ ಮೊರೆ ಹೋಗಿದೆ. ಇದರ ಮಧ್ಯೆಯೇ ದೇವರ ಅಸ್ತಿತ್ವದ ಪತ್ತೆಗೆ ಅಷ್ಟಮಂಗಲ ಪ್ರಶ್ನೆಗೆ ಮುಂದಾಗಿದೆ.

ಅಷ್ಟಮಂಗಲ ಪ್ರಶ್ನೆ ಜ್ಯೋತಿಷ್ಯದಲ್ಲಿ ಇದೊಂದು ನಿಗೂಢ ಶಾಸ್ತ್ರವಾಗಿದ್ದು, ದೀರ್ಘ ಕಾಲದ ಸಮಸ್ಯೆಗಳಿಗೆ, ದೇವಳ ವಿಷಯಗಳಿಗೆ, ಗುಪ್ತ ವಿಚಾರ ತಿಳಿಯುವುದಕ್ಕೆ ಮಾತ್ರ ಇದನ್ನು ಬಳಸಲಾಗುತ್ತದೆ. ಹೀಗಾಗಿ ಮಸೀದಿ ರಹಸ್ಯದ ಪತ್ತೆಗೆ ಹಿಂದೂ ಸಂಘಟನೆಗಳು ಅಷ್ಟಮಂಗಲ ಚಿಂತನೆ ನಡೆಸಲು ಮುಂದಾಗಿದೆ. ಮಸೀದಿ ಇರುವ ಜಾಗದ ಸಮೀಪದ ಯಾವುದಾದರೊಂದು ಜಾಗದಲ್ಲಿ ಪ್ರಶ್ನೆಯಿಟ್ಟು ಆ ಜಾಗದ ಸ್ಥಳ ಪುರಾಣ, ಧಾರ್ಮಿಕ ಇತಿಹಾಸಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು ಇದರ ಉದ್ದೇಶ.

 

Vishwa News 24

Recent Posts

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ – vishwanews24

ಕಾರ್ಕಳ: ಹೋಟೆಲ್‌ನ ಜೂಜಾಟ ಅಡ್ಡೆಯ ಮೇಲೆ ಪೊಲೀಸರ ದಾಳಿ ; ಆರು ಮಂದಿ ಅರೆಸ್ಟ್‌ ಕಾರ್ಕಳ: ಕಾರ್ಕಳ ತಾಲೂಕಿನ ನಿಟ್ಟೆ…

18 hours ago

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ – vishwanews24

ಕಾಂಗ್ರೆಸ್ ನನಗೆ ದೇವಾಲಯ ಇದ್ದಂತೆ  ; ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ: ಪ್ರದೀಪ್ ಈಶ್ವರ್‌ ಬೆಂಗಳೂರು: ಸಚಿವ ಸ್ಥಾನ ಸಿಗದ…

19 hours ago

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ – vishwanews24

ಕಾಪು: ಆ. 9ರಂದು ಯುವವಾಹಿನಿ ಟ್ರೋಫಿ ಚೆಸ್ ಪಂದ್ಯಾವಳಿ ಕಾಪು: ಯುವವಾಹಿನಿ (ರಿ.) ಕಾಪು ಘಟಕದ ನೇತೃತ್ವದಲ್ಲಿ ಶ್ರೀ ನಾರಾಯಣಗುರು…

19 hours ago

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು…

19 hours ago

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

21 hours ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

22 hours ago