Featured

ಮಂಗಳೂರು : ಮಳಲಿ ದರ್ಗಾ ವಿವಾದ – ಅಷ್ಟಮಂಗಲ ಪ್ರಶ್ನೆಗೆ ಮುಂದಾದ ವಿಹೆಚ್‌ಪಿ – Vishwaews24

ಧಾರ್ಮಿಕ ಸಾಕ್ಷ್ಯ ಪತ್ತೆ ಬಳಿಕ ಐತಿಹಾಸಿಕ ಪುರಾವೆ ಸಂಗ್ರಹಿಸಲು ಯೋಜಿಸಿದ ಹಿಂದೂ ಪರ ಸಂಘಟನೆಗಳು

ಮಂಗಳೂರು: ಮಂಡ್ಯದ ಜಾಮೀಯಾ ಮಸೀದಿ ವಿವಾದದ ಬೆನ್ನಲ್ಲೇ ಮಂಗಳೂರಿನಲ್ಲೂ ಮಸೀದಿಯ ಸತ್ಯಾಸತ್ಯತೆಯ ವಿವಾದವೊಂದು ಭುಗಿಲೇಳುವ ಸಾಧ್ಯತೆ ದಟ್ಟವಾಗಿದೆ. ಹಿಂದೂ ಪರ ಸಂಘಟನೆಗಳು ಅಷ್ಟಮಂಗಲ ಪ್ರಶ್ನಾ ಚಿಂತನೆ ಮೂಲಕ ಈ ಮಸೀದಿಯ ರಹಸ್ಯ ಪತ್ತೆಗೆ ಮುಂದಾಗಿದೆ. ಧಾರ್ಮಿಕ ಸಾಕ್ಷ್ಯ ಪತ್ತೆ ಬಳಿಕ ಐತಿಹಾಸಿಕ ಪುರಾವೆ ಸಂಗ್ರಹಿಸಲು ಯೋಜಿಸಿದೆ.

ಮಂಗಳೂರು ನಗರ ಹೊರವಲಯದ ಗಂಜಿಮಠದ ಮಳಳಿಯಲ್ಲಿರುವ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾದಲ್ಲಿ ಇತ್ತೀಚೆಗೆ ದೇವಸ್ಥಾನ ಮಾದರಿಯ ಗುಡಿ ಪತ್ತೆಯಾಗಿತ್ತು. ಈ ವಿಚಾರ ಮತ್ತೆ ಚರ್ಚೆಗೆ ಬಂದಿದ್ದು, ಮಸೀದಿಯ ರಹಸ್ಯ ಪತ್ತೆಗೆ ವಿಶ್ವ ಹಿಂದೂ ಪರಿಷತ್ ಮುಂದಾಗಿದೆ. ಅಷ್ಟಮಂಗಲ ಪ್ರಶ್ನೆ ನಡೆಸುವ ನಿರ್ಧಾರವನ್ನು ಮಾಡಿದೆ.

ವಿಶ್ವ ಹಿಂದೂ ಪರಿಷತ್ ಕೇರಳದ ಪ್ರಖ್ಯಾತ ಪುದುವಾಳ್‌ಗಳನ್ನು ಕರೆಸಲಿದ್ದು, ಅವರ ನೇತೃತ್ವದಲ್ಲಿ ಅಷ್ಟಮಂಗಲ ಪ್ರಶ್ನೆಗೆ ಚಿಂತನೆ ನಡೆಸಿದೆ. ಮಸೀದಿ ಜಾಗದಲ್ಲಿ ದೇವಾಲಯ ಇತ್ತು ಎಂಬುದು ಹಿಂದೂ ಸಂಘಟನೆಗಳ ವಾದವಾಗಿದ್ದು, ಇದನ್ನು ಅಷ್ಟಮಂಗಲ ಪ್ರಶ್ನೆ ಮೂಲಕ ರಹಸ್ಯ ಪತ್ತೆಗಿಳಿದು, ಧಾರ್ಮಿಕ ಸಾಕ್ಷ್ಯ ಪತ್ತೆ ಬಳಿಕ ಐತಿಹಾಸಿಕ ಪುರಾವೆ ಸಂಗ್ರಹಿಸಲು ಪ್ಲಾನ್ ಮಾಡಿದೆ. ಅಷ್ಟಮಂಗಲ ಪ್ರಶ್ನೆ ಬಳಿಕ ದಾಖಲೆ ಸಹಿತ ಕಾನೂನು ಹೋರಾಟಕ್ಕೆ ಯೋಜನೆ ರೂಪಿಸಿದೆ.

ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ದೇವಸ್ಥಾನ ಮಾದರಿಯ ಗುಡಿ ಪತ್ತೆಯಾಗಿತ್ತು. ದರ್ಗಾದ ಹಿಂಭಾಗದಲ್ಲಿ ದೇವಸ್ಥಾನದ ಕಲಶ, ತೋಮರ, ಕಂಬಗಳ ಮಾದರಿ ಸಿಕ್ಕಿತ್ತು. ವಿಹೆಚ್‌ಪಿ ಸ್ಥಳಕ್ಕೆ ಭೇಟಿ ನೀಡಿ, ನವೀಕರಣ ಕಾಮಗಾರಿ ಸ್ಥಗಿತಕ್ಕೆ ಕೋರ್ಟ್ ಮೊರೆ ಹೋಗಿದೆ. ಇದರ ಮಧ್ಯೆಯೇ ದೇವರ ಅಸ್ತಿತ್ವದ ಪತ್ತೆಗೆ ಅಷ್ಟಮಂಗಲ ಪ್ರಶ್ನೆಗೆ ಮುಂದಾಗಿದೆ.

ಅಷ್ಟಮಂಗಲ ಪ್ರಶ್ನೆ ಜ್ಯೋತಿಷ್ಯದಲ್ಲಿ ಇದೊಂದು ನಿಗೂಢ ಶಾಸ್ತ್ರವಾಗಿದ್ದು, ದೀರ್ಘ ಕಾಲದ ಸಮಸ್ಯೆಗಳಿಗೆ, ದೇವಳ ವಿಷಯಗಳಿಗೆ, ಗುಪ್ತ ವಿಚಾರ ತಿಳಿಯುವುದಕ್ಕೆ ಮಾತ್ರ ಇದನ್ನು ಬಳಸಲಾಗುತ್ತದೆ. ಹೀಗಾಗಿ ಮಸೀದಿ ರಹಸ್ಯದ ಪತ್ತೆಗೆ ಹಿಂದೂ ಸಂಘಟನೆಗಳು ಅಷ್ಟಮಂಗಲ ಚಿಂತನೆ ನಡೆಸಲು ಮುಂದಾಗಿದೆ. ಮಸೀದಿ ಇರುವ ಜಾಗದ ಸಮೀಪದ ಯಾವುದಾದರೊಂದು ಜಾಗದಲ್ಲಿ ಪ್ರಶ್ನೆಯಿಟ್ಟು ಆ ಜಾಗದ ಸ್ಥಳ ಪುರಾಣ, ಧಾರ್ಮಿಕ ಇತಿಹಾಸಗಳ ಬಗ್ಗೆ ಮಾಹಿತಿ ಸಂಗ್ರಹಿಸುವುದು ಇದರ ಉದ್ದೇಶ.

 

Vishwa News 24

Recent Posts

ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು – vishwanews24

ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ…

4 minutes ago

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ : ಅರ್ಜಿ ಆಹ್ವಾನ – vishwanews24

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ : ಅರ್ಜಿ ಆಹ್ವಾನ      ಉಡುಪಿ : ಮೀನುಗಾರಿಕೆ ಇಲಾಖೆಯ ವತಿಯಿಂದ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯಸಂಪದ…

15 minutes ago

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

18 hours ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

18 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

19 hours ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

19 hours ago