ಮಂಗಳೂರು ಮಳಲಿ ಮಸೀದಿಯಲ್ಲಿ ದೇಗುಲ ಪತ್ತೆ ವಿಚಾರ- ಮಳಲಿ ರಾಮಾಂಜನೇಯ ಮಂದಿರದಲ್ಲಿ ತಂಬೂಲ ಪ್ರಶ್ನೆಗೆ ಕ್ಷಣಗಣನೆ-ಬಿಗಿ ಪೊಲೀಸ್ ಬಂದೋಬಸ್ತು: vishwanews24
ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರಿನ ಹೊರವಲಯದ ಗಂಜಿಮಠ ಬಳಿಯ ಮಳಲಿ ಎಂಬಲ್ಲಿ ಏಪ್ರಿಲ್ 21ರಂದು ಮಸೀದಿ ನವೀಕರಣದ ವೇಳೆ ಹಿಂದೂ ದೇಗುಲ ಶೈಲಿಯ ಕುರುಹುಗಳು ದೊರೆತಿದ್ದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಇಂದು ತಾಂಬೂಲ ಪ್ರಶ್ನಾ ಚಿಂತನೆಯನ್ನು ಆಯೋಜಿಸಿದೆ.
ಹಿಂದೂಗಳ ಧಾರ್ಮಿಕ ನಂಬುಗೆಯ ಪ್ರಕಾರ, ಪುರಾಣದ ಸತ್ಯಾನುಸತ್ಯತೆಯನ್ನು ಜ್ಯೋತಿಷ್ಯದ ಉನ್ನತ ಸ್ಥಾನದಲ್ಲಿರುವ ಅಷ್ಟಮಂಗಲದಿಂದ ತಿಳಿಯಲು ಸಾಧ್ಯವಿದೆ. ಈ ಅಷ್ಟಮಂಗಲ ಏರ್ಪಡಿಸಿ ಮಳಲಿಯ ಮಸೀದಿಯಲ್ಲಿ ಪತ್ತೆಯಾದ ದೇಗುಲ ಶೈಲಿಯ ಇತಿಹಾಸವನ್ನು ಅರಿಯಲು ಹಿಂದೂ ಸಂಘಟನೆಗಳು ನಿರ್ಧರಿಸಿವೆ. ಅಷ್ಟಮಂಗಲವನ್ನು ಯಾವಾಗ ನಡೆಸಬೇಕು, ಎಲ್ಲಿ ನಡೆಸಬೇಕು, ಯಾವ ದೈವಿಕ ಶಕ್ತಿಯಿದೆ ಎಂಬುದನ್ನು ತಿಳಿಯಲು ತಾಂಬೂಲ ಪ್ರಶ್ನಾ ಚಿಂತನೆಗೆ ನಿರ್ಧರಿಸಲಾಗಿದೆ.
ಮಳಲಿಯ ಮಸೀದಿಯ ಸಮೀಪದಲ್ಲಿರುವ ಶ್ರೀರಾಮಂಜನೇಯ ಭಜನಾ ಮಂದಿರದಲ್ಲಿ ಬೆಳಿಗ್ಗೆ 8 ಗಂಟೆಗೆ ತಾಂಬೂಲ ಪ್ರಶ್ನಾ ಚಿಂತನೆ ನಡೆಯಲಿದೆ.
ಮಂಗಳೂರು ಸೋಮೇಶ್ವರ ಮೂಲದ ಗೋಪಾಲಕೃಷ್ಣ ಪಣಿಕ್ಕರ್ ಪ್ರಶ್ನಾ ಚಿಂತನೆ ನಡೆಯಲಿದೆ.
ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ಏರ್ಪಾಡಿಸಲಾಗಿದೆ,ಸೆಕ್ಷನ್ 144 ಜಾರಿಯಲ್ಲಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…