ಮಂಗಳೂರು ಮಳಲಿ ಮಸೀದಿಯಲ್ಲಿ ದೇಗುಲ ಪತ್ತೆ ವಿಚಾರ- ಮಳಲಿ ರಾಮಾಂಜನೇಯ ಮಂದಿರದಲ್ಲಿ ತಂಬೂಲ ಪ್ರಶ್ನೆಗೆ ಕ್ಷಣಗಣನೆ-ಬಿಗಿ ಪೊಲೀಸ್ ಬಂದೋಬಸ್ತು: vishwanews24
ಮಂಗಳೂರು (ದಕ್ಷಿಣ ಕನ್ನಡ): ಮಂಗಳೂರಿನ ಹೊರವಲಯದ ಗಂಜಿಮಠ ಬಳಿಯ ಮಳಲಿ ಎಂಬಲ್ಲಿ ಏಪ್ರಿಲ್ 21ರಂದು ಮಸೀದಿ ನವೀಕರಣದ ವೇಳೆ ಹಿಂದೂ ದೇಗುಲ ಶೈಲಿಯ ಕುರುಹುಗಳು ದೊರೆತಿದ್ದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಇಂದು ತಾಂಬೂಲ ಪ್ರಶ್ನಾ ಚಿಂತನೆಯನ್ನು ಆಯೋಜಿಸಿದೆ.
ಹಿಂದೂಗಳ ಧಾರ್ಮಿಕ ನಂಬುಗೆಯ ಪ್ರಕಾರ, ಪುರಾಣದ ಸತ್ಯಾನುಸತ್ಯತೆಯನ್ನು ಜ್ಯೋತಿಷ್ಯದ ಉನ್ನತ ಸ್ಥಾನದಲ್ಲಿರುವ ಅಷ್ಟಮಂಗಲದಿಂದ ತಿಳಿಯಲು ಸಾಧ್ಯವಿದೆ. ಈ ಅಷ್ಟಮಂಗಲ ಏರ್ಪಡಿಸಿ ಮಳಲಿಯ ಮಸೀದಿಯಲ್ಲಿ ಪತ್ತೆಯಾದ ದೇಗುಲ ಶೈಲಿಯ ಇತಿಹಾಸವನ್ನು ಅರಿಯಲು ಹಿಂದೂ ಸಂಘಟನೆಗಳು ನಿರ್ಧರಿಸಿವೆ. ಅಷ್ಟಮಂಗಲವನ್ನು ಯಾವಾಗ ನಡೆಸಬೇಕು, ಎಲ್ಲಿ ನಡೆಸಬೇಕು, ಯಾವ ದೈವಿಕ ಶಕ್ತಿಯಿದೆ ಎಂಬುದನ್ನು ತಿಳಿಯಲು ತಾಂಬೂಲ ಪ್ರಶ್ನಾ ಚಿಂತನೆಗೆ ನಿರ್ಧರಿಸಲಾಗಿದೆ.
ಮಳಲಿಯ ಮಸೀದಿಯ ಸಮೀಪದಲ್ಲಿರುವ ಶ್ರೀರಾಮಂಜನೇಯ ಭಜನಾ ಮಂದಿರದಲ್ಲಿ ಬೆಳಿಗ್ಗೆ 8 ಗಂಟೆಗೆ ತಾಂಬೂಲ ಪ್ರಶ್ನಾ ಚಿಂತನೆ ನಡೆಯಲಿದೆ.
ಮಂಗಳೂರು ಸೋಮೇಶ್ವರ ಮೂಲದ ಗೋಪಾಲಕೃಷ್ಣ ಪಣಿಕ್ಕರ್ ಪ್ರಶ್ನಾ ಚಿಂತನೆ ನಡೆಯಲಿದೆ.
ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ಏರ್ಪಾಡಿಸಲಾಗಿದೆ,ಸೆಕ್ಷನ್ 144 ಜಾರಿಯಲ್ಲಿದೆ.
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…