Featured

ಮಂಗಳೂರು: ಮಳಲಿ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ: ಹಿಂದೂ ಪರ ಸಂಘಟನೆಯಿಂದ ಗಣಹೋಮ – Vishwanews24

ಮಂಗಳೂರು: ಮಳಲಿ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ: ಹಿಂದೂ ಪರ ಸಂಘಟನೆಯಿಂದ ಗಣಹೋಮ

ಮಂಗಳೂರು: ಮಳಲಿ ಮಸೀದಿ ಜಾಗದಲ್ಲಿ ಮಂದಿರ ಇತ್ತು ಎನ್ನುವ ವಿಚಾರಕ್ಕೆ ಸಂಬಂಧಿಸಿ ಮಂದಿರ ನಿರ್ಮಾಣ ವಿಚಾರಕ್ಕೆ ಹಿಂದೂ ಪರ ಸಂಘಟನೆ ಇಂದು ಗಣಹೋಮ ನೆರವೇರಿಸಿದೆ. ಗಣಹೋಮದ ಮೂಲಕ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲು ಸಂಕಲ್ಪ ಮಾಡಲಾಗಿದೆ.

ಮಂಗಳೂರು ತಾಲೂಕಿನ ಮಳಲಿ ಪ್ರದೇಶದಲ್ಲಿರುವ ಮಸೀದಿ ಒಳಗಡೆ ಮಂದಿರದ ರಚನೆ ಕಂಡು ಬಂದಿತ್ತು. ಮಸೀದಿ ನವೀಕರಣದ ವೇಳೆ ಮಂದಿರ ರಚನೆಯ ಕುರುಹು, ದೇವಸ್ಥಾನದ ಗರ್ಭ ಗುಡಿಯನ್ನು ಹೋಲುವ ರಚನೆ ಪತ್ತೆಯಾಗಿತ್ತು. ಇದಾದ ಬಳಿಕ ಈ ವಿಚಾರ ವಿವಾದಕ್ಕೆ ಕಾರಣವಾಯಿತು. ನ್ಯಾಯಾಲಯದ ಮೆಟ್ಟಿಲೇರಿತ್ತು. ತಾಂಬೂಲ ಪ್ರಶ್ನೆಯ ಮೊರೆ ಹೋಗಿದ್ದ ಹಿಂದೂ ಸಂಘಟನೆಗಳು, ಕಳೆದ ಮೇ ತಿಂಗಳಿನಲ್ಲಿ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಇಟ್ಟರು. ಪ್ರಶ್ನೆ ಚಿಂತನೆಯಲ್ಲಿ ಗಣಯಾಗ ನಡೆಸಲು ಸಲಹೆ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಮಳಲಿಯಲ್ಲಿ ಮಂದಿರ ನಿರ್ಮಾಣದ ಸಂಕಲ್ಪ ಮಾಡಲಾಗಿದೆ. ಗಣಹೋಮದ ಮೂಲಕ ಮಂದಿರ ನಿರ್ಮಾಣಕ್ಕೆ ದೇವರ ಅನುಗ್ರಹ ಪಡೆಯಲಾಗಿದೆ. ಮಳಲಿಯ ರಾಮಾಂಜನೇಯ ಭಜನಾ ಮಂದಿರದಲ್ಲಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಗಣಹೋಮ ನಡೆದಿದೆ. ಕಾರ್ಯಕ್ರಮದಲ್ಲಿ ಶಾಸಕ ಭರತ್ ಶೆಟ್ಟಿ, ಹಿಂದೂ ಮುಖಂಡರಾದ ಶರಣ್ ಪಂಪ್ ವೆಲ್ ಸೇರಿದಂತೆ ಹಲವು ಮಂದಿ ಹಿಂದೂ ಸಂಘಟನೆಗಳ ನಾಯಕರು ಭಾಗಿಯಾಗಿದ್ದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

12 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago