ಮಂಗಳೂರು: ಮಳಲಿ ಮಸೀದಿ ಜಾಗದಲ್ಲಿ ಮಂದಿರ ಇತ್ತು ಎನ್ನುವ ವಿಚಾರಕ್ಕೆ ಸಂಬಂಧಿಸಿ ಮಂದಿರ ನಿರ್ಮಾಣ ವಿಚಾರಕ್ಕೆ ಹಿಂದೂ ಪರ ಸಂಘಟನೆ ಇಂದು ಗಣಹೋಮ ನೆರವೇರಿಸಿದೆ. ಗಣಹೋಮದ ಮೂಲಕ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲು ಸಂಕಲ್ಪ ಮಾಡಲಾಗಿದೆ.
ಮಂಗಳೂರು ತಾಲೂಕಿನ ಮಳಲಿ ಪ್ರದೇಶದಲ್ಲಿರುವ ಮಸೀದಿ ಒಳಗಡೆ ಮಂದಿರದ ರಚನೆ ಕಂಡು ಬಂದಿತ್ತು. ಮಸೀದಿ ನವೀಕರಣದ ವೇಳೆ ಮಂದಿರ ರಚನೆಯ ಕುರುಹು, ದೇವಸ್ಥಾನದ ಗರ್ಭ ಗುಡಿಯನ್ನು ಹೋಲುವ ರಚನೆ ಪತ್ತೆಯಾಗಿತ್ತು. ಇದಾದ ಬಳಿಕ ಈ ವಿಚಾರ ವಿವಾದಕ್ಕೆ ಕಾರಣವಾಯಿತು. ನ್ಯಾಯಾಲಯದ ಮೆಟ್ಟಿಲೇರಿತ್ತು. ತಾಂಬೂಲ ಪ್ರಶ್ನೆಯ ಮೊರೆ ಹೋಗಿದ್ದ ಹಿಂದೂ ಸಂಘಟನೆಗಳು, ಕಳೆದ ಮೇ ತಿಂಗಳಿನಲ್ಲಿ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಇಟ್ಟರು. ಪ್ರಶ್ನೆ ಚಿಂತನೆಯಲ್ಲಿ ಗಣಯಾಗ ನಡೆಸಲು ಸಲಹೆ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಮಳಲಿಯಲ್ಲಿ ಮಂದಿರ ನಿರ್ಮಾಣದ ಸಂಕಲ್ಪ ಮಾಡಲಾಗಿದೆ. ಗಣಹೋಮದ ಮೂಲಕ ಮಂದಿರ ನಿರ್ಮಾಣಕ್ಕೆ ದೇವರ ಅನುಗ್ರಹ ಪಡೆಯಲಾಗಿದೆ. ಮಳಲಿಯ ರಾಮಾಂಜನೇಯ ಭಜನಾ ಮಂದಿರದಲ್ಲಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಗಣಹೋಮ ನಡೆದಿದೆ. ಕಾರ್ಯಕ್ರಮದಲ್ಲಿ ಶಾಸಕ ಭರತ್ ಶೆಟ್ಟಿ, ಹಿಂದೂ ಮುಖಂಡರಾದ ಶರಣ್ ಪಂಪ್ ವೆಲ್ ಸೇರಿದಂತೆ ಹಲವು ಮಂದಿ ಹಿಂದೂ ಸಂಘಟನೆಗಳ ನಾಯಕರು ಭಾಗಿಯಾಗಿದ್ದರು.
ಪಡುಬಿದ್ರಿ : ಉದ್ಯಮಿ ಇನ್ನಾ ಉದಯ ಶೆಟ್ಟಿ ನಿಧನ ಪಡುಬಿದ್ರೆ: ಉದ್ಯಮಿ ಇನ್ನಾ ಉದಯ ಶೆಟ್ಟಿ(50) ಅವರು ಅಲ್ಪಕಾಲದ ಅಸೌಖ್ಯದಿಂದಾಗಿ…
ಯೋಗೀಶ್ ಗೌಡ ಕೊಲೆ ಪ್ರಕರಣ : ವಿನಯ್ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಬೆಂಗಳೂರು: ಯೋಗೇಶ್ ಗೌಡ…
ಜಮೀರ್ ಅಹ್ಮದ್ ಅವರು ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ : ಯತೀಂದ್ರ ಸಿದ್ದರಾಮಯ್ಯ ಬೆಳಗಾವಿ : ಜಮೀರ್ ಅಹ್ಮದ್ ಅವರು ನಮ್ಮ…
ಮಂಗಳೂರು: 16 ವರ್ಷದ ಬಾಲಕಿ ನಾಪತ್ತೆ; ಪೊಲೀಸರಿಂದ ಲುಕ್ಔಟ್ ನೋಟಿಸ್ ಜಾರಿ ಮಂಗಳೂರು: ಕೊಣಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು…
ಪಡುಬಿದ್ರಿ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ : ಪೂರ್ವಭಾವಿ ಸಭೆ ಪಡುಬಿದ್ರಿ: ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಬ್ರಹ್ಮಕಲಾಶೋತ್ಸವದ ಪ್ರಯುಕ್ತ…
ಯಾದಗಿರಿ: ಬಸ್- ಕಾರು ಮಧ್ಯೆ ಭೀಕರ ಅಪಘಾತ; 6 ಮಂದಿ ಸಜೀವ ದಹನ ಸುರಪುರ : ಬಸ್ ಮತ್ತು ಕಾರಿನ…