Featured

ಮಂಗಳೂರು: ಮಳಲಿ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ: ಹಿಂದೂ ಪರ ಸಂಘಟನೆಯಿಂದ ಗಣಹೋಮ – Vishwanews24

ಮಂಗಳೂರು: ಮಳಲಿ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ: ಹಿಂದೂ ಪರ ಸಂಘಟನೆಯಿಂದ ಗಣಹೋಮ

ಮಂಗಳೂರು: ಮಳಲಿ ಮಸೀದಿ ಜಾಗದಲ್ಲಿ ಮಂದಿರ ಇತ್ತು ಎನ್ನುವ ವಿಚಾರಕ್ಕೆ ಸಂಬಂಧಿಸಿ ಮಂದಿರ ನಿರ್ಮಾಣ ವಿಚಾರಕ್ಕೆ ಹಿಂದೂ ಪರ ಸಂಘಟನೆ ಇಂದು ಗಣಹೋಮ ನೆರವೇರಿಸಿದೆ. ಗಣಹೋಮದ ಮೂಲಕ ಮಸೀದಿ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲು ಸಂಕಲ್ಪ ಮಾಡಲಾಗಿದೆ.

ಮಂಗಳೂರು ತಾಲೂಕಿನ ಮಳಲಿ ಪ್ರದೇಶದಲ್ಲಿರುವ ಮಸೀದಿ ಒಳಗಡೆ ಮಂದಿರದ ರಚನೆ ಕಂಡು ಬಂದಿತ್ತು. ಮಸೀದಿ ನವೀಕರಣದ ವೇಳೆ ಮಂದಿರ ರಚನೆಯ ಕುರುಹು, ದೇವಸ್ಥಾನದ ಗರ್ಭ ಗುಡಿಯನ್ನು ಹೋಲುವ ರಚನೆ ಪತ್ತೆಯಾಗಿತ್ತು. ಇದಾದ ಬಳಿಕ ಈ ವಿಚಾರ ವಿವಾದಕ್ಕೆ ಕಾರಣವಾಯಿತು. ನ್ಯಾಯಾಲಯದ ಮೆಟ್ಟಿಲೇರಿತ್ತು. ತಾಂಬೂಲ ಪ್ರಶ್ನೆಯ ಮೊರೆ ಹೋಗಿದ್ದ ಹಿಂದೂ ಸಂಘಟನೆಗಳು, ಕಳೆದ ಮೇ ತಿಂಗಳಿನಲ್ಲಿ ಮಂದಿರದಲ್ಲಿ ತಾಂಬೂಲ ಪ್ರಶ್ನೆ ಇಟ್ಟರು. ಪ್ರಶ್ನೆ ಚಿಂತನೆಯಲ್ಲಿ ಗಣಯಾಗ ನಡೆಸಲು ಸಲಹೆ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಮಳಲಿಯಲ್ಲಿ ಮಂದಿರ ನಿರ್ಮಾಣದ ಸಂಕಲ್ಪ ಮಾಡಲಾಗಿದೆ. ಗಣಹೋಮದ ಮೂಲಕ ಮಂದಿರ ನಿರ್ಮಾಣಕ್ಕೆ ದೇವರ ಅನುಗ್ರಹ ಪಡೆಯಲಾಗಿದೆ. ಮಳಲಿಯ ರಾಮಾಂಜನೇಯ ಭಜನಾ ಮಂದಿರದಲ್ಲಿ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಗಣಹೋಮ ನಡೆದಿದೆ. ಕಾರ್ಯಕ್ರಮದಲ್ಲಿ ಶಾಸಕ ಭರತ್ ಶೆಟ್ಟಿ, ಹಿಂದೂ ಮುಖಂಡರಾದ ಶರಣ್ ಪಂಪ್ ವೆಲ್ ಸೇರಿದಂತೆ ಹಲವು ಮಂದಿ ಹಿಂದೂ ಸಂಘಟನೆಗಳ ನಾಯಕರು ಭಾಗಿಯಾಗಿದ್ದರು.

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

13 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

14 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

14 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

14 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

14 hours ago