ಮಂಗಳೂರು: ಮಳಲಿ ಮಸೀದಿ ಕುರಿತು ಮಂಗಳೂರು ಜಿಲ್ಲಾ ಮೂರನೇ ಹೆಚ್ಚುವರಿ ನ್ಯಾಯಾಲಯ ನೀಡಿರುವ ತೀರ್ಪನ್ನು ವಿಎಚ್ ಪಿ ಸ್ವಾಗತಿಸುತ್ತದೆ. ಇದು ಹಿಂದೂಗಳ ಭಾವನೆಗೆ ಸಂದಿರುವ ಮೊದಲನೇ ಹಂತದ ಜಯ. ಈ ಮೂಲಕ ನಾವು ಮಂದಿರವಿರುವ ಸ್ಥಳದಲ್ಲಿಯೇ ಭವ್ಯವಾದ ಮಂದಿರ ನಿರ್ಮಾಣವನ್ನು ಮಾಡಲಿದ್ದೇವೆ ಎಂದು ವಿಎಚ್ ಪಿ ಪ್ರಾಂತೀಯ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದರು.
ನಗರದ ಕದ್ರಿಯ ವಿಶ್ವಶ್ರೀ ಸಭಾಂಗಣದಲ್ಲಿ ಮಾತನಾಡಿದ ಅವರು, ಇಂದು ನ್ಯಾಯಾಲಯ ಮಸೀದಿ ಆಡಳಿತ ಕಮಿಟಿಯ ಅರ್ಜಿಯನ್ನು ವಜಾ ಮಾಡಿ ವಿಎಚ್ ಪಿ ಅರ್ಜಿಯನ್ನು ಎತ್ತಿ ಹಿಡಿದಿದೆ. ಮುಂದಿನ ದಿನಗಳಲ್ಲಿ ಕೋರ್ಟ್ ಸಂಪೂರ್ಣವಾಗಿ ಹಿಂದೂಗಳ ಪರ ತೀರ್ಪು ನೀಡಲಿದೆ. ಮಸೀದಿಯ ಕಮಿಟಿಯನ್ನು ಆಗ್ರಹಿಸಿಯೋ, ವಿನಂತಿಸಿಯೋ ಹೋರಾಟದಲ್ಲಿ ಸಂಘರ್ಷವಿಲ್ಲದಂತೆ ಅವರೊಡನೆ ಚರ್ಚಿಸಿ ಇತ್ಯರ್ಥ ಮಾಡಲು ಚಿಂತಿಸಿದ್ದೇವೆ ಎಂದರು.
ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ..
ಮಸೀದಿ ಇರುವ ಸ್ಥಳದಲ್ಲಿ ದೇವಸ್ಥಾನದ ಕುರುಹು ಇದ್ದ ಕಾರಣಕ್ಕೆ ಮಸೀದಿಯ ನವೀಕರಣಕ್ಕೆ ತಡೆ ತಂದಿದೆವು. ಅಲ್ಲಿ 800 ವರ್ಷಗಳ ಹಿಂದೆ ಅಲ್ಲಿ ದೇವಾಲಯ ಇತ್ತು ಎಂಬ ನಂಬಿಕೆ ಇದೆ. ತಾಂಬೂಲ ಪ್ರಶ್ನೆಯಲ್ಲೂ ಅದು ಗೋಚರಿಸಿತ್ತು. ಮುಂದಿನ ದಿನಗಳಲ್ಲಿ ಅಷ್ಟಮಂಗಲ ಪ್ರಶ್ನೆ ಇಟ್ಟು ಮುಂದಿನ ನಿರ್ಧಾರ ಮಾಡುತ್ತೇವೆ ಎಂದರು. ವಿವಾದಿತ ಸ್ಥಳವನ್ನು ಪುರಾತತ್ವ ಇಲಾಖೆಯಿಂದ ಸರ್ವೆ ನಡೆಸಲು ಸಾಕಷ್ಟು ಬಾರಿ ಜಿಲ್ಲಾಡಳಿತವನ್ನು ಕೋರಿದ್ದೇವು. ಆದರೆ ಈವರೆಗೆ ನಮಗೆ ಯಾವ ಸ್ಪಂದನೆಯೂ ‘ ದೊರಕಿಲ್ಲ, ಆದ್ಭರಿಂದ ನೂತನ ಜಿಲ್ಲಾಧಿಕಾರಿಯವರು ಈ ಬಗ್ಗೆ ತಕ್ಷಣ ಪುರಾತತ್ವ ಇಲಾಖೆಯಿಂದ ಸರ್ವೆ ಮಾಡಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಶರಣ್ ಪಂಪ್ ವೆಲ್ ಹೇಳಿದರು.
ಉಡುಪಿ: ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮುಹಮ್ಮದ್ ಗೌಸ್ ಗೆ ರಾಷ್ಟ್ರಪತಿ ಪದಕ ಪ್ರದಾನ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…