ಮಂಗಳೂರು: ಮಳಲಿ ಮಸೀದಿ ಕುರಿತು ಮಂಗಳೂರು ಜಿಲ್ಲಾ ಮೂರನೇ ಹೆಚ್ಚುವರಿ ನ್ಯಾಯಾಲಯ ನೀಡಿರುವ ತೀರ್ಪನ್ನು ವಿಎಚ್ ಪಿ ಸ್ವಾಗತಿಸುತ್ತದೆ. ಇದು ಹಿಂದೂಗಳ ಭಾವನೆಗೆ ಸಂದಿರುವ ಮೊದಲನೇ ಹಂತದ ಜಯ. ಈ ಮೂಲಕ ನಾವು ಮಂದಿರವಿರುವ ಸ್ಥಳದಲ್ಲಿಯೇ ಭವ್ಯವಾದ ಮಂದಿರ ನಿರ್ಮಾಣವನ್ನು ಮಾಡಲಿದ್ದೇವೆ ಎಂದು ವಿಎಚ್ ಪಿ ಪ್ರಾಂತೀಯ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹೇಳಿದರು.
ನಗರದ ಕದ್ರಿಯ ವಿಶ್ವಶ್ರೀ ಸಭಾಂಗಣದಲ್ಲಿ ಮಾತನಾಡಿದ ಅವರು, ಇಂದು ನ್ಯಾಯಾಲಯ ಮಸೀದಿ ಆಡಳಿತ ಕಮಿಟಿಯ ಅರ್ಜಿಯನ್ನು ವಜಾ ಮಾಡಿ ವಿಎಚ್ ಪಿ ಅರ್ಜಿಯನ್ನು ಎತ್ತಿ ಹಿಡಿದಿದೆ. ಮುಂದಿನ ದಿನಗಳಲ್ಲಿ ಕೋರ್ಟ್ ಸಂಪೂರ್ಣವಾಗಿ ಹಿಂದೂಗಳ ಪರ ತೀರ್ಪು ನೀಡಲಿದೆ. ಮಸೀದಿಯ ಕಮಿಟಿಯನ್ನು ಆಗ್ರಹಿಸಿಯೋ, ವಿನಂತಿಸಿಯೋ ಹೋರಾಟದಲ್ಲಿ ಸಂಘರ್ಷವಿಲ್ಲದಂತೆ ಅವರೊಡನೆ ಚರ್ಚಿಸಿ ಇತ್ಯರ್ಥ ಮಾಡಲು ಚಿಂತಿಸಿದ್ದೇವೆ ಎಂದರು.
ಸತೀಶ್ ಜಾರಕಿಹೊಳಿ ಹೇಳಿಕೆಯನ್ನು ವಿರೋಧಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಪ್ರತಿಭಟನೆ..
ಮಸೀದಿ ಇರುವ ಸ್ಥಳದಲ್ಲಿ ದೇವಸ್ಥಾನದ ಕುರುಹು ಇದ್ದ ಕಾರಣಕ್ಕೆ ಮಸೀದಿಯ ನವೀಕರಣಕ್ಕೆ ತಡೆ ತಂದಿದೆವು. ಅಲ್ಲಿ 800 ವರ್ಷಗಳ ಹಿಂದೆ ಅಲ್ಲಿ ದೇವಾಲಯ ಇತ್ತು ಎಂಬ ನಂಬಿಕೆ ಇದೆ. ತಾಂಬೂಲ ಪ್ರಶ್ನೆಯಲ್ಲೂ ಅದು ಗೋಚರಿಸಿತ್ತು. ಮುಂದಿನ ದಿನಗಳಲ್ಲಿ ಅಷ್ಟಮಂಗಲ ಪ್ರಶ್ನೆ ಇಟ್ಟು ಮುಂದಿನ ನಿರ್ಧಾರ ಮಾಡುತ್ತೇವೆ ಎಂದರು. ವಿವಾದಿತ ಸ್ಥಳವನ್ನು ಪುರಾತತ್ವ ಇಲಾಖೆಯಿಂದ ಸರ್ವೆ ನಡೆಸಲು ಸಾಕಷ್ಟು ಬಾರಿ ಜಿಲ್ಲಾಡಳಿತವನ್ನು ಕೋರಿದ್ದೇವು. ಆದರೆ ಈವರೆಗೆ ನಮಗೆ ಯಾವ ಸ್ಪಂದನೆಯೂ ‘ ದೊರಕಿಲ್ಲ, ಆದ್ಭರಿಂದ ನೂತನ ಜಿಲ್ಲಾಧಿಕಾರಿಯವರು ಈ ಬಗ್ಗೆ ತಕ್ಷಣ ಪುರಾತತ್ವ ಇಲಾಖೆಯಿಂದ ಸರ್ವೆ ಮಾಡಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ ಎಂದು ಶರಣ್ ಪಂಪ್ ವೆಲ್ ಹೇಳಿದರು.
ಉಡುಪಿ: ಅಗ್ನಿಶಾಮಕ ಸಹಾಯಕ ಠಾಣಾಧಿಕಾರಿ ಮುಹಮ್ಮದ್ ಗೌಸ್ ಗೆ ರಾಷ್ಟ್ರಪತಿ ಪದಕ ಪ್ರದಾನ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…