ಮಂಗಳೂರು : ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ಮಂಗಳೂರು ಮೂರನೇ ಜೆಎಂಎಫ್ ಸಿ ನ್ಯಾಯಾಲಯವು ಫೆ.17ಕ್ಕೆ ಮುಂದೂಡಿದೆ.
ಮಳಲಿ ಮಸೀದಿಯ ಸರ್ವೇ ನಡೆಸಲು ಅವಕಾಶದ ಕುರಿತು ಸಂಘ ಪರಿವಾರದ ಪರ ವಕೀಲರು ಇಂದು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.
ಎದುರು ಕಕ್ಷಿಯ ವಾದಕ್ಕೆ ಪ್ರತಿವಾದ ಮಂಡಿಸಲು ನಿರಾಕರಿದ ಮಸೀದಿ ಪರ ವಕೀಲರು, ಈಗಾಗಲೇ ಮಸೀದಿ ವಕ್ಫ್ ಆಸ್ತಿ ಎಂಬ ಕುರಿತಾದ ವ್ಯಾಜ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿದೆ. ಈ ಕುರಿತು ಯಾವುದೇ ಆದೇಶವನ್ನು ಉಚ್ಚ ನ್ಯಾಯಾಲಯ ನೀಡಿಲ್ಲ. ಹೈಕೋರ್ಟ್ ಆದೇಶ ಬಂದ ಬಳಿಕವಷ್ಟೇ ಮಸೀದಿಯ ಸರ್ವೇಗೆ ಅವಕಾಶದ ಕುರಿತಾದ ವಾದ ಮಂಡಿಸಲು ಸಾಧ್ಯ.
ಹಾಗಾಗಿ ಹೈಕೋರ್ಟ್ ಆದೇಶ ಬರುವವರೆಗೆ ಸರ್ವೇಗೆ ಸಂಬಂಧಿಸಿದ ವಾದ ವಿವಾದವನ್ನು ಮುಂದೂಡಬೇಕೆಂದು ವಾದಿಸಿದರು.
ಈ ಹಿನ್ನೆಲೆಯಲ್ಲಿ ಮಸೀದಿ ಪರ ವಕೀಲರ ವಾದಕ್ಕೆ ಮನ್ನಣೆ ನೀಡಿದ ಮಂಗಳೂರು ಮೂರನೇ ಜೆಎಂಎಫ್ ಸಿ ನ್ಯಾಯಾಲಯವು ವಿಚಾರಣೆಯನ್ನು ಫೆ.17ಕ್ಕೆ ಮುಂದೂಡಿ ಆದೇಶಿಸಿದೆ
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…