Featured

ಮಂಗಳೂರು: ಮಳಲಿ ಮಸೀದಿ ವಿವಾದ ; ವಿಹೆಚ್​ಪಿ ಅರ್ಜಿ ಸ್ವೀಕರಿಸಿದ ಕೋರ್ಟ್​..Vishwanews24

ಮಂಗಳೂರು: ಮಳಲಿ ಮಸೀದಿ ವಿವಾದ ; ಮಹತ್ವದ ತೀರ್ಪು ಪ್ರಕಟ , ವಿಹೆಚ್​ಪಿ ಅರ್ಜಿ ಸ್ವೀಕರಿಸಿದ ಕೋರ್ಟ್​..

ಮಂಗಳೂರು: ನಗರದ ಹೊರವಲಯದ ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ  ಈ ವ್ಯಾಜ್ಯ ವಕ್ಫ್ ಟ್ರಿಬ್ಯುನಲ್​​ನಲ್ಲಿ ನಡೆಯಬೇಕೋ ಅಥವಾ ಸಿವಿಲ್ ಕೋರ್ಟ್​ನಲ್ಲಿ ನಡೆಯಬೇಕೋ ಎಂಬ ಬಗ್ಗೆ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ತೀರ್ಪು ನೀಡಿದೆ.

ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಿ , ಮೂರನೇ ಹೆಚ್ಚುವರಿ ಸಿವಿಲ್‌ ಕೋರ್ಟ್‌ , ’ಈ ವ್ಯಾಜ್ಯವನ್ನು ಸಿವಿಲ್‌ ನ್ಯಾಯಾಲಯದಲ್ಲಿ ವಿಚಾರಣೆ ಮಾಡಬಹುದೆಂದು ’ ತೀರ್ಪು ನೀಡಿದೆ.

ಕಾರ್ಕಳ : ನಿಟ್ಟೆ ಕಲ್ಯಾ ಗ್ರಾಮದ ಮೆಸ್ಕಾಂ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ – Vishwanews24

ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿ ಬಳಿ ಅಸಯ್ಯಿದ್ ಅಬ್ದುಲ್ಲಾ ಹಿಲ್ ಮದನಿ ದರ್ಗಾವನ್ನು ನವೀಕರಣಕ್ಕಾಗಿ ಕೆಡವಿದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು. ಈ ಹಿನ್ನಲೆ ಮಸೀದಿ ಸಮುಚ್ಚಯದ ಸರ್ವೇಕ್ಷಣೆಗೆ ಆದೇಶ ಮಾಡಬೇಕು ಎಂದು ಹಿಂದುತ್ವ ಪರ ಸಂಘಟನೆಗಳು ಮನವಿ ಮಾಡಿದ್ದವು. ಇದನ್ನು ವಿರೋಧಿಸಿದ್ದ ಮಸೀದಿ ಆಡಳಿತ ಮಂಡಳಿ ಮತ್ತು ಮುಸ್ಲಿಂ ಸಂಘಟನೆಗಳು ಈ ದಾವೆಯ ವಿಚಾರಣೆ ನಡೆಸುವ ಅಧಿಕಾರವು ನ್ಯಾಯಾಯಕ್ಕೆ ಇಲ್ಲ. ಒಂದು ಜಾಗವನ್ನು ಪುರಾತನ ಸ್ಮಾರಕ ಎಂದು ಹೇಳಲು ಕೇಂದ್ರ ಸರ್ಕಾರದ ಅಧಿಸೂಚನೆ ಇರಬೇಕು. ಆದರೆ ಮಳಲಿ ಮಸೀದಿಯ ಮೇಲೆ ಯಾವುದೇ ಗೆಜೆಟ್ ನೋಟಿಫಿಕೇಶನ್ ಇರಲಿಲ್ಲ. ಹೀಗಿರುವಾಗ ಇದನ್ನು ಪುರಾತನ ಸ್ಮಾರಕವೆಂದು ಹೇಳಲು ಸಾಧ್ಯವಿಲ್ಲ ಅಲ್ಲದೇ ಇದನ್ನ ಸ್ಮಾರಕವೋ ಅಲ್ಲವೋ ಎಂದು ಹೇಳಲು ಸಿವಿಲ್ ಕೋರ್ಟ್​ಗೆ ಅಧಿಕಾರ ಇಲ್ಲ , ವಕ್ಫ್ ನ್ಯಾಯಾಲಯದಲ್ಲಿ ಮಾತ್ರ ವಿಚಾರಣೆ ಮಾಡಬಹುದು ಎಂದು ವಾದ ಮಂಡಿಸಿತ್ತು.

ದೇವಾಲಯ ಶೈಲಿ ಪತ್ತೆಯಾಗಿದ್ದರಿಂದ ಜ್ಞಾನವಾಪಿ ಮಾದರಿಯಲ್ಲಿ ಮಳಲಿ ಮಸೀದಿಯಲ್ಲಿಯೂ ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎ ಚ್ ಪಿ ಪರ ವಕೀಲ ಚಿದಾನಂದ ಕೆದಿಲಾಯ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಮುಂದಿನ ವಿಚಾರಣೆ 2023 ಜ.8 ರಂದು ನಿಗದಿಯಾಗಿದೆ

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

52 minutes ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

1 hour ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

1 hour ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

1 hour ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago