ಮಂಗಳೂರು: ಬಿಜೈ ಕೆಎಸ್ಆರ್ಟಿಸಿ ಬಳಿ ಇರುವ ಮಸಾಜ್ ಸೆಂಟರ್ ಒಂದಕ್ಕೆ ದುಷ್ಕರ್ಮಿಗಳು ಏಕಾ ಏಕಿ ದಾಳಿ ನಡೆಸಿದ್ದು ಸೆಂಟರ್ ನಲ್ಲಿದ್ದ ಉಪಕರಣಗಳನ್ನು ಪುಡಿಮಾಡಿ ಅಟ್ಟಹಾಸ ಮೆರೆದಿದ್ದಾರೆ. ಮಸಾಜ್ ಸೆಂಟರ್ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂದು ಆರೋಪಿಸಿ ದಾಳಿ ಮಾಡಲಾಗಿದೆ.
ನಾಲ್ಕೈದು ಜನರ ತಂಡವೊಂದು ನಗರದಲ್ಲಿನ ಮಸಾಜ್ ಸೆಂಟರ್ ಒಂದಕ್ಕೆ ದಾಳಿ ಮಾಡಿ ಹೀನಾಯ ಕೃತ್ಯ ಎಸಗಿದ್ದಾರೆ. ಯಾವ ಕಾರಣಕ್ಕೆ ದಾಳಿ ಮಾಡಿದ್ದಾರೆ ಎಂಬ ಅಂಶ ಇನ್ನೂ ಬೆಳಕಿಗೆ ಬಂದಿಲ್ಲ. ನಗರದಲ್ಲಿನ ಕೆಲ ಪುಂಡರಿಂದ ಈ ಕೃತ್ಯ ಎಸಗಲಾಗಿದ್ದು ದ್ವೇಷದ ಕಾರಣ ದಾಳಿಯಾಗಿರಬಹುದು ಎಂದು ಶಂಕಿಸಲಾಗಿದೆ.
ದಾಳಿ ವೇಳೆ, ನಾಲ್ಕು ಜನ ಯುವತಿಯರು ಹಾಗೂ ಓರ್ವ ವ್ಯಕ್ತಿ ಸೆಲೂನ್ನಲ್ಲಿ ಇದ್ದರು. ಈ ವೇಳೆ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಅಲ್ಲದೇ ಪೀಠೋಪಕರಣ ಧ್ವಂಸ ಮಾಡಿದ್ದಾರೆ. ನಗರದಾದ್ಯಂತ ಇರುವ ಮಸಾಜ್ ಸೆಂಟರ್ಗಳನ್ನು ಮುಚ್ಚುವಂತೆ ದುಷ್ಕರ್ಮಿಗಳು ಆಗ್ರಹಿಸಿದ್ದಾರೆ. ಮಸಾಜ್ ಸೆಂಟರ್ಗೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…