ಮಂಗಳೂರು: ನಗರದ ಹೊರವಲಯದ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮದ ಮಸೀದಿ ಕಟ್ಟಡದಲ್ಲಿ ಪ್ರಾಚೀನ ಕಾಲದ ದೇವಾಲಯದ ಮಾದರಿಯ ಗುಡಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಮುಖಂಡರ ದೂರಿನನ್ವಯ ಸ್ಥಳಕ್ಕೆ ತಹಶೀಲ್ದಾರ್ ಪುರಂದರ್ ಅವರು ಭೇಟಿಯನ್ನು ಕೊಟ್ಟಿದ್ದಾರೆ.
ಮಂಗಳೂರು ತಾಲೂಕಿನ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮದ ಗಂಜಿಮಠ ಪಂಚಾಯಿತಿಯಲ್ಲಿರುವ ಸರ್ವೇ ನಂ 1/10 ನಲ್ಲಿ ಅಸ್ಸಾಯಿದ್ ಅಬ್ದುಲ್ಲಾಹಿಲ್ ಮದನಿ ಜುಮಾ ಮಸೀದಿಯಿದ್ದು, ಇದರ ನವೀಕರಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ. ಈ ವೇಳೆ ಮಸೀದಿ ಅರ್ಧ ಕಟ್ಟಡ ಕೆಡವಿದಾಗ ಪುರಾತನ ದೇವಸ್ಥಾನ ಪತ್ತೆಯಾಗಿದೆ.
ಕಟ್ಟಡದ ಒಳಗೆ ಮತ್ತು ಹೊರಗಡೆ ನೋಡುವಾಗ ಪ್ರಾಚೀನ ದೇವಸ್ಥಾನದ ಕಟ್ಟಡದ ಶೈಲಿಯಲ್ಲಿ ಕಂಡು ಬರುತ್ತಿವೆ ಎನ್ನಲಾಗಿದೆ. ಸದ್ಯ ಸ್ಥಳಕ್ಕೆ ತಹಶೀಲ್ದಾರ್ ಭೇಟಿ ಕೊಟ್ಟಿದ್ದು ಎರಡೂ ಸಮುದಾಯಗಳ ಮುಖಂಡರ ಜೊತೆ ಶಾಂತಿ ಮಾತುಕತೆ ನಡೆಸಿದ್ದಾರೆ. ಎರಡೂ ಸಮುದಾಯದ ಮುಖಂಡರು ಅಧಿಕಾರಿಗಳ ಮಾತಿಗೆ ಒಪ್ಪಿಗೆ ಸೂಚಿಸಿದ್ದಾರೆ. ಸದ್ಯ ಸ್ಥಳದಲ್ಲಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.
ಜಾಗದ ದಾಖಲೆ ಹಾಗೂ ಇತಿಹಾಸದ ಬಗ್ಗೆ ಮಾಹಿತಿ ಕಲೆ ಹಾಕಲು ಜಿಲ್ಲಾಡಳಿತ ಮುಂದಾಗಿದ್ದು, ಸದ್ಯ ದರ್ಗಾದ ನವೀಕರಣ ಕಾಮಗಾರಿ ಸ್ಥಗಿತಕ್ಕೆ ತಹಶಿಲ್ದಾರ್ ಸೂಚನೆ ನೀಡಿದ್ದಾರೆ. ಹಿನ್ನಲೆ ಕೆಲಸ ಸ್ಥಗಿತಗೊಳಿಸಿ ಜಿಲ್ಲಾಡಳಿತದ ನಡೆಗೆ ದರ್ಗಾ ಆಡಳಿತ ಸಮ್ಮತಿ ಸೂಚಿಸಿದೆ.
ಸುಮಾರು 800 ವರ್ಷಗಳ ಇತಿಹಾಸ ಈ ಮಳಲಿ ಮಸೀದಿಗಿದ್ದು, ದೇವಸ್ಥಾನ ಶೈಲಿಯ ಕಟ್ಟಡದಲ್ಲಿ ಸದ್ಯ ಮೌಲ್ವಿಗಳ ವಿಶ್ರಾಂತಿ ಸ್ಥಳವಾಗಿ ಮಾರ್ಪಟ್ಟಿದೆ. ಈ ಹಿಂದೆ ಹಿಂದಿನ ಮೌಲ್ವಿಗಳು ಈ ಸ್ಥಳದಲ್ಲೇ ನಮಾಝ್ ಮಾಡುತ್ತಿದ್ದರು, ಹೀಗಾಗಿ ಈ ಕಟ್ಟಡವನ್ನು ಕೆಡದೇ ಹಾಗೆಯೇ ಉಳಿಸಿಕೊಂಡಿದ್ದೇವೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…