ಉಡುಪಿ: ಮಂಗಳೂರು- ಮಸ್ಕತ್ ನಡುವೆ ನೇರ ಸಂಚಾರ ಮಾಡುತ್ತಿದ್ದ ವಿಮಾನ ಸೇವೆ ಯನ್ನು ಪುನಃ ಆರಂಭಿ ಸುವ ನಿಟ್ಟಿನಲ್ಲಿ ಈಗಾಗಲೇ ಏರ್ ಇಂಡಿಯಾ ಸಂಸ್ಥೆ ನಿರ್ಧರಿಸಿದ್ದು ಮಾರ್ಚ್ ತಿಂಗಳಿಂದ ಈ ಸೇವೆ ಆರಂಭವಾಗಲಿದೆ ಎಂದು ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಕಿಂಜರಾಪು ತಿಳಿಸಿದ್ದಾರೆ.
ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಪುನರಾರಂಭಿಸುವ ಬಗ್ಗೆ ಸಂಸದ ಕೋಟ ಶ್ರೀನಿವಾಸಪೂಜಾರಿಯವರು ಕೇಂದ್ರ ವಿಮಾನ ಯಾನ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು.
ಇದನ್ನೂ ಓದಿ:
ಸಂಸದರ ಪತ್ರದ ಹಿನ್ನೆಲೆಯಲ್ಲ್ಲಿ ಏರ್ಇಂಡಿಯಾ ಸಂಸ್ಥೆಯೊಂದಿಗೆ ಸಮಾಲೋಚನೆ ಮಾಡಲಾಗಿದ್ದು ಮಾರ್ಚ್ನಿಂದ ವಿಮಾನಯಾನ ಪುನರಾರಂಭಿಸುವ ಕುರಿತು ಸಂಸ್ಥೆಯು ನಿರ್ಣಯ ತೆಗೆದುಕೊಂಡಿದೆ ಎಂದು ಸಚಿವರು ಮಾಹಿತಿ ನೀಡಿದರು.
ಕರಾವಳಿ ಜಿಲ್ಲೆಯಿಂದ ಮಸ್ಕತ್ ಹೋಗಿ ನೆಲೆಸಿರುವವರಿಗೆ ಈ ಸೇವೆ ಯಿಂದ ಹೆಚ್ಚಿನ ಅನುಕೂಲವಾಗಲಿದೆ. ಕರಾವಳಿ ಭಾಗದ ಅನೇಕರು ಅರಬ್ ದೇಶಗಳಲ್ಲಿ ಉದ್ಯೋಗ, ಶಿಕ್ಷಣ ಸಹಿತ ನಾನಾ ಉದ್ದೇಶಕ್ಕೆ ನೆಲೆಯಾಗಿದ್ದಾರೆ.
ಇದನ್ನೂ ಓದಿ:
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…