ಮಂಗಳೂರು : ಬಿಜೆಪಿಯ ಮೇಲೆ ವಿಶ್ವಾಸವಿಟ್ಟು ಮಂಗಳೂರಿನ ಜನತೆ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ ನೀಡಿದ್ದಾರೆ. ಜನತೆಯ ಆಶಯಕ್ಕೆ ತಕ್ಕಂತೆ ಮುಂದಿನ ದಿನಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಜವಾಬ್ದಾರಿಯುತ ಆಡಳಿತ ನೀಡಲಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವಾಗ ಮಂಗಳೂರು ಮಹಾನಗರ ಪಾಲಿಕೆಯಲ್ಲೂ ಬಿಜೆಪಿ ಆಡಳಿತ ಬರಬೇಕು ಎಂಬ ನೆಲೆಯಲ್ಲಿ ಮತದಾರರು ಬಿಜೆಪಿಗೆ ಆಶೀರ್ವಾದ ಮಾಡಿದ್ದಾರೆ. ಮಂಗಳೂರು ಮಹಾನಗರ ಅಭಿವೃದ್ಧಿಗೆ ಈಗ ಇನ್ನಷ್ಟು ವೇಗ ಸಿಗಲಿದೆ. ಜನರ ನಂಬಿಕೆ, ವಿಶ್ವಾಸಕ್ಕೆ ಚ್ಯುತಿ ಬರದಂತೆ ಬಿಜೆಪಿ ಆಡಳಿತ ನಡೆಸಲಿದೆ.
ಕೇಂದ್ರ, ರಾಜ್ಯ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಜತೆಗೆ ನಗರದ ಜ್ವಲಂತ ಸಮಸ್ಯೆಗಳಿಗೆ ಬಿಜೆಪಿ ಸ್ಪಂದಿಸಲಿದೆ. ಗೆಲುವು ಸಾಧಿಸಿದ ಪಕ್ಷದ ಎಲ್ಲ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಪಕ್ಷದ ಗೆಲುವಿನ ಅಹರ್ನಿಶಿ ದುಡಿದ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಅಭ್ಯರ್ಥಿಗಳು, ಕಾರ್ಯಕರ್ತರಿಗೆ ಈ ಸಂದರ್ಭ ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…