Featured

ಮಂಗಳೂರು: ಮಹಾನಗರ ಪಾಲಿಕೆಯ ಅಧಿಕಾರಿಗಳ ಸೋಗಿನಲ್ಲಿ ಮಹಿಳೆಗೆ ವಂಚಿಸಿ, ಚಿನ್ನಾಭರಣ ಹಾಗೂ ನಗದು ಕಳವು – Vishwanews24

ಮಂಗಳೂರು: ಮಹಾನಗರ ಪಾಲಿಕೆಯ ಅಧಿಕಾರಿಗಳ ಸೋಗಿನಲ್ಲಿ ಮಹಿಳೆಗೆ ವಂಚಿಸಿ, ಚಿನ್ನಾಭರಣ ಹಾಗೂ ನಗದು ಕಳವು – Vishwanews24

ಮಂಗಳೂರು : ಮಹಾನಗರ ಪಾಲಿಕೆಯ ಅಧಿಕಾರಿಗಳ ಸೋಗಿನಲ್ಲಿ ಮನೆಯೊಂದಕ್ಕೆ ಬಂದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ನಗರದ ಉರ್ವಸ್ಟೋರ್‌‌‌‌‌‌‌ ಬಳಿಯ ದಡ್ಡಲ್‌ಕಾಡ್‌‌‌‌ನಲ್ಲಿ ನಡೆದಿದೆ.

ನ.16ರ ಮಂಗಳವಾರ ಬೆಳಗ್ಗೆ 10.30ರ ಸುಮಾರಿಗೆ ದಡ್ಡಲ್‌‌‌ಕಾಡ್‌‌ನ ಮಹಿಳೆ ಇದ್ದ ಮನೆಯೊಂದಕ್ಕೆ ಬಂದಿದ್ದ ಇಬ್ಬರು ಮಂಗಳೂರು ನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಎಂದು ಹೇಳಿ ಸ್ವಚ್ಛತೆಯ ಕುರಿತು ಪರಿಶೀಲನೆ ನಡೆಸಲಿದೆ ಎಂದು ಹೇಳಿದ್ದಾರೆ. ಬಳಿಕ ಮಹಿಳೆಯನ್ನು ಮನೆಯ ಹಿಂಬದಿಗೆ ಕರೆದುಕೊಂಡು ಹೋಗಿ ಸ್ವಚ್ಛತೆ ಬಗ್ಗೆ ನಾಟಕವಾಡಿದ್ದಾರೆ. ಈ ವೇಳೆ ಮಹಿಳೆ ನೆರೆಮನೆಯವರನ್ನು ಕರೆದಿದ್ದು, ನೆರೆಮನೆಯವರು ಬಂದು ಸಂಶಯ ವ್ಯಕ್ತಪಡಿಸಿ, ಅವರಲ್ಲಿ ಗುರುತಿನ ಚೀಟಿ ನೀಡಿ ಎಂದು ಕೇಳಿದ್ದಾರೆ. ಆಗ ಆ ಇಬ್ಬರು ಗುರುತಿನ ಚೀಟಿ ಬೈಕ್‌ನಲ್ಲಿದೆ ತರುತ್ತೇವೆ ಎನ್ನುತ್ತಾ ಅಲ್ಲಿಂದ ವಾಪಾಸ್ಸಾಗಿದ್ದಾರೆ.

ಸಂಜೆ ವೇಳೆ ಮಹಿಳೆ ಮನೆಯ ಒಳಗಿದ್ದ ಕಪಾಟಿನಲ್ಲಿ ನೋಡಿದಾಗ 68 ಗ್ರಾಂ ಚಿನ್ನಾಭರಣ ಹಾಗೂ 71,000 ರೂ. ನಗದು ಕಳವಾಗಿರುವುದು ಗಮನಕ್ಕೆ ಬಂದಿದೆ.

ಇಬ್ಬರು ವ್ಯಕ್ತಿಗಳು ಮನೆಯ ಹಿಂಭಾಗದಲ್ಲಿ ಮಹಿಳೆಯೊಂದಿಗೆ ಮಾತನಾಡುತ್ತಿದ್ದ ಸಂದರ್ಭ ಮಹಿಳೆಯ ಗಮನಕ್ಕೆ ಬಾರದಂತೆ ಇನ್ನೋರ್ವ ಮನೆಯೊಳಗೆ ಪ್ರವೇಶಿಸಿ ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಕಪಾಟಿನ ಕೀ ಕಪಾಟಿನ ಎದುರೇ ನೇತು ಹಾಕಿದ್ದರಿಂದ ಸುಲಭವಾಗಿ ಕಳವು ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ಬಗ್ಗೆ ಉರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

19 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

19 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ 2025-2026 ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

19 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

20 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

21 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

21 hours ago