ಮಂಗಳೂರು : ಮಹಾನಗರ ಪಾಲಿಕೆಯ ಅಧಿಕಾರಿಗಳ ಸೋಗಿನಲ್ಲಿ ಮನೆಯೊಂದಕ್ಕೆ ಬಂದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ನಗರದ ಉರ್ವಸ್ಟೋರ್ ಬಳಿಯ ದಡ್ಡಲ್ಕಾಡ್ನಲ್ಲಿ ನಡೆದಿದೆ.
ನ.16ರ ಮಂಗಳವಾರ ಬೆಳಗ್ಗೆ 10.30ರ ಸುಮಾರಿಗೆ ದಡ್ಡಲ್ಕಾಡ್ನ ಮಹಿಳೆ ಇದ್ದ ಮನೆಯೊಂದಕ್ಕೆ ಬಂದಿದ್ದ ಇಬ್ಬರು ಮಂಗಳೂರು ನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಎಂದು ಹೇಳಿ ಸ್ವಚ್ಛತೆಯ ಕುರಿತು ಪರಿಶೀಲನೆ ನಡೆಸಲಿದೆ ಎಂದು ಹೇಳಿದ್ದಾರೆ. ಬಳಿಕ ಮಹಿಳೆಯನ್ನು ಮನೆಯ ಹಿಂಬದಿಗೆ ಕರೆದುಕೊಂಡು ಹೋಗಿ ಸ್ವಚ್ಛತೆ ಬಗ್ಗೆ ನಾಟಕವಾಡಿದ್ದಾರೆ. ಈ ವೇಳೆ ಮಹಿಳೆ ನೆರೆಮನೆಯವರನ್ನು ಕರೆದಿದ್ದು, ನೆರೆಮನೆಯವರು ಬಂದು ಸಂಶಯ ವ್ಯಕ್ತಪಡಿಸಿ, ಅವರಲ್ಲಿ ಗುರುತಿನ ಚೀಟಿ ನೀಡಿ ಎಂದು ಕೇಳಿದ್ದಾರೆ. ಆಗ ಆ ಇಬ್ಬರು ಗುರುತಿನ ಚೀಟಿ ಬೈಕ್ನಲ್ಲಿದೆ ತರುತ್ತೇವೆ ಎನ್ನುತ್ತಾ ಅಲ್ಲಿಂದ ವಾಪಾಸ್ಸಾಗಿದ್ದಾರೆ.
ಸಂಜೆ ವೇಳೆ ಮಹಿಳೆ ಮನೆಯ ಒಳಗಿದ್ದ ಕಪಾಟಿನಲ್ಲಿ ನೋಡಿದಾಗ 68 ಗ್ರಾಂ ಚಿನ್ನಾಭರಣ ಹಾಗೂ 71,000 ರೂ. ನಗದು ಕಳವಾಗಿರುವುದು ಗಮನಕ್ಕೆ ಬಂದಿದೆ.
ಇಬ್ಬರು ವ್ಯಕ್ತಿಗಳು ಮನೆಯ ಹಿಂಭಾಗದಲ್ಲಿ ಮಹಿಳೆಯೊಂದಿಗೆ ಮಾತನಾಡುತ್ತಿದ್ದ ಸಂದರ್ಭ ಮಹಿಳೆಯ ಗಮನಕ್ಕೆ ಬಾರದಂತೆ ಇನ್ನೋರ್ವ ಮನೆಯೊಳಗೆ ಪ್ರವೇಶಿಸಿ ಕಳ್ಳತನ ಮಾಡಿರುವುದು ಗಮನಕ್ಕೆ ಬಂದಿದೆ. ಕಪಾಟಿನ ಕೀ ಕಪಾಟಿನ ಎದುರೇ ನೇತು ಹಾಕಿದ್ದರಿಂದ ಸುಲಭವಾಗಿ ಕಳವು ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಘಟನೆಯ ಬಗ್ಗೆ ಉರ್ವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ ಶ್ರೀಕೃಷ್ಣ ದರ್ಶನಕ್ಕೆ ನೂತನ ಸರತಿ ಸಾಲು ಹಾಗೂ ಐಡಿ ಆಧಾರಿತ ಪ್ರವೇಶ ವ್ಯವಸ್ಥೆ ಉದ್ಘಾಟನೆ ಉಡುಪಿ : ಶ್ರೀ…
ಮಂಗಳೂರು: ಸ್ಕೂಟರ್ ಸವಾರನಿಗೆ ಖಾರದ ಪುಡಿ ಎರಚಿ ದರೋಡೆ; ಪ್ರಕರಣ ದಾಖಲು ಮಂಗಳೂರು: ಗುರುಪುರ ಬಂಗ್ಲಗುಡ್ಡೆ ಬಳಿ ಸ್ಕೂಟರ್ ಸವಾರರೊಬ್ಬರಿಗೆ…
ಪಿಯು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ 8 ತಿಂಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಗಳು ಬೆಂಗಳೂರು: ನಗರದ ವಿದ್ಯಾರಣ್ಯಪುರ…
ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಶಿಕ್ಷಣ ಇಲಾಖೆ ನಿಷೇಧ; ಹೊಸ ಮಾರ್ಗಸೂಚಿ ಪ್ರಕಟ, ಅಧಿಕೃತ ಆದೇಶ ಬೆಂಗಳೂರು : ಶಾಲಾ ಸಾಂಸ್ಕೃತಿಕ…
ಉಡುಪಿ : ಅಗ್ನಿ ಅವಘಡ ವೇಳೆ ಅಗ್ನಿಶಾಮಕ ಸೇವೆಯಲ್ಲಿ ವಿಳಂಬವಾಗಿಲ್ಲ : ಅಗ್ನಿಶಾಮಕ ಅಧಿಕಾರಿ ಸ್ಪಷ್ಟನೆ ಉಡುಪಿ: ಇತ್ತೀಚೆಗೆ ಉಡುಪಿ…
ಮೇ 1 ರಿಂದ LPG ನಿಯಮಗಳಲ್ಲಿ ಭಾರೀ ಬದಲಾವಣೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿ ಮತ್ತು ಪೂರೈಕೆಯಲ್ಲಿನ ವ್ಯತ್ಯಯದಿಂದಾಗಿ…