ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ಎರಡನೇ ಅವಧಿಯ ಮೇಯರ್, ಉಪಮೇಯರ್ ಚುನಾವಣೆ ಇಂದು ನಡೆದಿದ್ದು ಮೇಯರ್ ಆಗಿ ಬಿಜೆಪಿಯ ಹಿರಿಯ ಸದಸ್ಯ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಆಗಿ ಸುಮಂಗಲಾ ರಾವ್ ಆಯ್ಕೆಯಾಗಿದ್ದಾರೆ.
ಮೇಯರ್ ಸಾಮಾನ್ಯ ಹಾಗೂ ಉಪ ಮೇಯರ್ ಸಾಮಾನ್ಯ ಮಹಿಳೆ ಮೀಸಲಾತಿಯಿದ್ದು ಮೇಯರ್ ಸ್ಥಾನಕ್ಕೆ ಪ್ರೇಮಾನಂದ ಅವರ ಹೆಸರು ಕೇಳಿಬಂದಿದ್ದರೂ ಕೂಡಾ ಉಪಮೇಯರ್ ಸ್ಥಾನಕ್ಕೆ ಸುಮಾರು 10 ಕ್ಕೂ ಅಧಿಕ ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದರು.
ಇತರರಿಗೆ ಮಾದರಿಯಾಗುವ ಬದುಕು ನಮ್ಮದಾಗಬೇಕು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ -Vishwanews24
ಮಾರ್ಚ್ 2 ರ ಮಂಗಳವಾರ ಮಧ್ಯಾಹ್ನ ಮತದಾನ ನಡೆದಿದ್ದು ನಿರೀಕ್ಷೆಯಂತೆ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿಯವರು ಆಯ್ಕೆಯಾಗಿದ್ದು ಉಪಮೇಯರ್ ಆಗಿ ಸುಮಂಗಲಾ ರಾವ್ ಆಯ್ಕೆಯಾಗಿದ್ದಾರೆ.
ಒಟ್ಟು 64 ಮತಗಳು (60 ಕಾರ್ಪೊರೇಟರ್ಗಳು, 2 ಶಾಸಕರು) ಮತಗಳಿದ್ದು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಎಂಎಲ್ಸಿ ಬಿ ಎಂ ಫಾರೂಕ್ ಗೈರುಹಾಜರಾಗಿದ್ದರು. ಶಾಸಕ ವೇದವ್ಯಾಸ್ ಕಾಮತ್, ಶಾಸಕ ಭರತ್ ವೈ ಶೆಟ್ಟಿ ಉಪಸ್ಥಿತರಿದ್ದರು. ಎಸ್ಡಿಪಿಐನ ಇಬ್ಬರು ತಟಸ್ಥರಾಗಿ ನಿಂತರು. ಚುನಾವಣೆ ನಡೆಸಲು ಚುನಾವಣಾ ಅಧಿಕಾರಿ ಪ್ರಕಾಶ್, ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ಮನಪಾ ಉಪ ಆಯುಕ್ತ ಸಂತೋಷ್ ಉಪಸ್ಥಿತರಿದ್ದರು.
ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿ ಬಿಜೆಪಿಯ ಪ್ರೇಮಾನಂದ ಶೆಟ್ಟಿ ಅವರು 46 ಮತಗಳನ್ನು ಗಳಿಸಿ ಜಯ ಗಳಿಸಿದ್ದು ಕಾಂಗ್ರೆಸ್ನ ಅನಿಲ್ ಕುಮಾರ್ 14 ಮತಗಳನ್ನು ಗಳಿಸಿದರು.
ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ ಬಿಜೆಪಿಯ ಸುಮಂಗಲಾ ರಾವ್ 46 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ನ ಜೆಸಿಂತಾ ಆಲ್ಫ್ರೆಡ್ 14 ಮತಗಳನ್ನು ಗಳಿಸಿದ್ದಾರೆ.
ಟೂಲ್ ಕಿಟ್ ಪ್ರಕರಣ : ನಿಖಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ -Vishwanews24
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…