ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ಎರಡನೇ ಅವಧಿಯ ಮೇಯರ್, ಉಪಮೇಯರ್ ಚುನಾವಣೆ ಇಂದು ನಡೆದಿದ್ದು ಮೇಯರ್ ಆಗಿ ಬಿಜೆಪಿಯ ಹಿರಿಯ ಸದಸ್ಯ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಆಗಿ ಸುಮಂಗಲಾ ರಾವ್ ಆಯ್ಕೆಯಾಗಿದ್ದಾರೆ.
ಮೇಯರ್ ಸಾಮಾನ್ಯ ಹಾಗೂ ಉಪ ಮೇಯರ್ ಸಾಮಾನ್ಯ ಮಹಿಳೆ ಮೀಸಲಾತಿಯಿದ್ದು ಮೇಯರ್ ಸ್ಥಾನಕ್ಕೆ ಪ್ರೇಮಾನಂದ ಅವರ ಹೆಸರು ಕೇಳಿಬಂದಿದ್ದರೂ ಕೂಡಾ ಉಪಮೇಯರ್ ಸ್ಥಾನಕ್ಕೆ ಸುಮಾರು 10 ಕ್ಕೂ ಅಧಿಕ ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದರು.
ಇತರರಿಗೆ ಮಾದರಿಯಾಗುವ ಬದುಕು ನಮ್ಮದಾಗಬೇಕು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ -Vishwanews24
ಮಾರ್ಚ್ 2 ರ ಮಂಗಳವಾರ ಮಧ್ಯಾಹ್ನ ಮತದಾನ ನಡೆದಿದ್ದು ನಿರೀಕ್ಷೆಯಂತೆ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿಯವರು ಆಯ್ಕೆಯಾಗಿದ್ದು ಉಪಮೇಯರ್ ಆಗಿ ಸುಮಂಗಲಾ ರಾವ್ ಆಯ್ಕೆಯಾಗಿದ್ದಾರೆ.
ಒಟ್ಟು 64 ಮತಗಳು (60 ಕಾರ್ಪೊರೇಟರ್ಗಳು, 2 ಶಾಸಕರು) ಮತಗಳಿದ್ದು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಎಂಎಲ್ಸಿ ಬಿ ಎಂ ಫಾರೂಕ್ ಗೈರುಹಾಜರಾಗಿದ್ದರು. ಶಾಸಕ ವೇದವ್ಯಾಸ್ ಕಾಮತ್, ಶಾಸಕ ಭರತ್ ವೈ ಶೆಟ್ಟಿ ಉಪಸ್ಥಿತರಿದ್ದರು. ಎಸ್ಡಿಪಿಐನ ಇಬ್ಬರು ತಟಸ್ಥರಾಗಿ ನಿಂತರು. ಚುನಾವಣೆ ನಡೆಸಲು ಚುನಾವಣಾ ಅಧಿಕಾರಿ ಪ್ರಕಾಶ್, ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ಮನಪಾ ಉಪ ಆಯುಕ್ತ ಸಂತೋಷ್ ಉಪಸ್ಥಿತರಿದ್ದರು.
ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿ ಬಿಜೆಪಿಯ ಪ್ರೇಮಾನಂದ ಶೆಟ್ಟಿ ಅವರು 46 ಮತಗಳನ್ನು ಗಳಿಸಿ ಜಯ ಗಳಿಸಿದ್ದು ಕಾಂಗ್ರೆಸ್ನ ಅನಿಲ್ ಕುಮಾರ್ 14 ಮತಗಳನ್ನು ಗಳಿಸಿದರು.
ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ ಬಿಜೆಪಿಯ ಸುಮಂಗಲಾ ರಾವ್ 46 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ನ ಜೆಸಿಂತಾ ಆಲ್ಫ್ರೆಡ್ 14 ಮತಗಳನ್ನು ಗಳಿಸಿದ್ದಾರೆ.
ಟೂಲ್ ಕಿಟ್ ಪ್ರಕರಣ : ನಿಖಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ -Vishwanews24
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…