ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ಎರಡನೇ ಅವಧಿಯ ಮೇಯರ್, ಉಪಮೇಯರ್ ಚುನಾವಣೆ ಇಂದು ನಡೆದಿದ್ದು ಮೇಯರ್ ಆಗಿ ಬಿಜೆಪಿಯ ಹಿರಿಯ ಸದಸ್ಯ ಪ್ರೇಮಾನಂದ ಶೆಟ್ಟಿ, ಉಪಮೇಯರ್ ಆಗಿ ಸುಮಂಗಲಾ ರಾವ್ ಆಯ್ಕೆಯಾಗಿದ್ದಾರೆ.
ಮೇಯರ್ ಸಾಮಾನ್ಯ ಹಾಗೂ ಉಪ ಮೇಯರ್ ಸಾಮಾನ್ಯ ಮಹಿಳೆ ಮೀಸಲಾತಿಯಿದ್ದು ಮೇಯರ್ ಸ್ಥಾನಕ್ಕೆ ಪ್ರೇಮಾನಂದ ಅವರ ಹೆಸರು ಕೇಳಿಬಂದಿದ್ದರೂ ಕೂಡಾ ಉಪಮೇಯರ್ ಸ್ಥಾನಕ್ಕೆ ಸುಮಾರು 10 ಕ್ಕೂ ಅಧಿಕ ಅಭ್ಯರ್ಥಿಗಳು ಆಕಾಂಕ್ಷಿಗಳಾಗಿದ್ದರು.
ಇತರರಿಗೆ ಮಾದರಿಯಾಗುವ ಬದುಕು ನಮ್ಮದಾಗಬೇಕು : ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ -Vishwanews24
ಮಾರ್ಚ್ 2 ರ ಮಂಗಳವಾರ ಮಧ್ಯಾಹ್ನ ಮತದಾನ ನಡೆದಿದ್ದು ನಿರೀಕ್ಷೆಯಂತೆ ಮೇಯರ್ ಆಗಿ ಪ್ರೇಮಾನಂದ ಶೆಟ್ಟಿಯವರು ಆಯ್ಕೆಯಾಗಿದ್ದು ಉಪಮೇಯರ್ ಆಗಿ ಸುಮಂಗಲಾ ರಾವ್ ಆಯ್ಕೆಯಾಗಿದ್ದಾರೆ.
ಒಟ್ಟು 64 ಮತಗಳು (60 ಕಾರ್ಪೊರೇಟರ್ಗಳು, 2 ಶಾಸಕರು) ಮತಗಳಿದ್ದು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಎಂಎಲ್ಸಿ ಬಿ ಎಂ ಫಾರೂಕ್ ಗೈರುಹಾಜರಾಗಿದ್ದರು. ಶಾಸಕ ವೇದವ್ಯಾಸ್ ಕಾಮತ್, ಶಾಸಕ ಭರತ್ ವೈ ಶೆಟ್ಟಿ ಉಪಸ್ಥಿತರಿದ್ದರು. ಎಸ್ಡಿಪಿಐನ ಇಬ್ಬರು ತಟಸ್ಥರಾಗಿ ನಿಂತರು. ಚುನಾವಣೆ ನಡೆಸಲು ಚುನಾವಣಾ ಅಧಿಕಾರಿ ಪ್ರಕಾಶ್, ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ, ಮನಪಾ ಉಪ ಆಯುಕ್ತ ಸಂತೋಷ್ ಉಪಸ್ಥಿತರಿದ್ದರು.
ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿ ಬಿಜೆಪಿಯ ಪ್ರೇಮಾನಂದ ಶೆಟ್ಟಿ ಅವರು 46 ಮತಗಳನ್ನು ಗಳಿಸಿ ಜಯ ಗಳಿಸಿದ್ದು ಕಾಂಗ್ರೆಸ್ನ ಅನಿಲ್ ಕುಮಾರ್ 14 ಮತಗಳನ್ನು ಗಳಿಸಿದರು.
ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ ಬಿಜೆಪಿಯ ಸುಮಂಗಲಾ ರಾವ್ 46 ಮತಗಳನ್ನು ಗಳಿಸಿದರೆ, ಕಾಂಗ್ರೆಸ್ನ ಜೆಸಿಂತಾ ಆಲ್ಫ್ರೆಡ್ 14 ಮತಗಳನ್ನು ಗಳಿಸಿದ್ದಾರೆ.
ಟೂಲ್ ಕಿಟ್ ಪ್ರಕರಣ : ನಿಖಿತಾ ಜಾಕೋಬ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್ -Vishwanews24
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…