ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಬೋಳೂರು ವಾರ್ಡ್ನ ಬಿಜೆಪಿ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಅವರು ಕಾರಿನೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲಾಗಿದ್ದಾರೆ.
ಜಗದೀಶ್ ಶೆಟ್ಟಿ ಅವರು ಬೆಳಗ್ಗಿನಿಂದಲೇ ಯಾರ ಮೊಬೈಲ್ ಕರೆಯನ್ನೂ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಸಂಶಯಗೊಂಡ ಮನೆಯವರು ಜನಪ್ರತಿನಿಧಿಗಳಿಗೆ ತಿಳಿಸಿದ್ದು, ಬಳಿಕ ಮೊಬೈಲ್ ಟವರ್ ಲೊಕೇಶನ್ ಆಧಾರದ ಮೇಲೆ ಹುಡುಕಿದಾಗ ಸ್ಟೇಟ್ ಬ್ಯಾಂಕ್ ಪ್ರದೇಶದಲ್ಲಿ ಲೊಕೇಶನ್ ಕಂಡುಬಂದಿದೆ. ತಕ್ಷಣ ಅಲ್ಲಿಗೆ ತೆರಳಿದಾಗ ಕಾರಿನೊಳಗೆ ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿದ್ದರು.
ಅಕ್ಕಪಕ್ಕದವರಿಗೆ ವಿಷಯ ತಿಳಿದು ಕಾರಿನ ಗಾಜನ್ನು ಒಡೆದು ಜಗದೀಶ್ ಅವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಸೇರಿಸುವ ವೇಳೆಗೆ ವಿಷ ಸೇವನೆ ಮಾಡಿ 2-3 ಗಂಟೆ ಆಗಿರಬಹುದು ಎಂದು ತಿಳಿದು ಬಂದಿದೆ. ಆರೋಗ್ಯ ಸ್ಥಿತಿ ತುಸು ಗಂಭೀರವಾಗಿದ್ದರೂ ಪ್ರಾಣಾಪಾಯವಿಲ್ಲ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಇತರ ಜನಪ್ರತಿನಿಧಿಗಳು, ಮುಖಂಡರು ಭೇಟಿ ನೀಡಿದ್ದಾರೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…