ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಬೋಳೂರು ವಾರ್ಡ್ನ ಬಿಜೆಪಿ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಅವರು ಕಾರಿನೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲಾಗಿದ್ದಾರೆ.
ಜಗದೀಶ್ ಶೆಟ್ಟಿ ಅವರು ಬೆಳಗ್ಗಿನಿಂದಲೇ ಯಾರ ಮೊಬೈಲ್ ಕರೆಯನ್ನೂ ಸ್ವೀಕರಿಸುತ್ತಿರಲಿಲ್ಲ. ಇದರಿಂದ ಸಂಶಯಗೊಂಡ ಮನೆಯವರು ಜನಪ್ರತಿನಿಧಿಗಳಿಗೆ ತಿಳಿಸಿದ್ದು, ಬಳಿಕ ಮೊಬೈಲ್ ಟವರ್ ಲೊಕೇಶನ್ ಆಧಾರದ ಮೇಲೆ ಹುಡುಕಿದಾಗ ಸ್ಟೇಟ್ ಬ್ಯಾಂಕ್ ಪ್ರದೇಶದಲ್ಲಿ ಲೊಕೇಶನ್ ಕಂಡುಬಂದಿದೆ. ತಕ್ಷಣ ಅಲ್ಲಿಗೆ ತೆರಳಿದಾಗ ಕಾರಿನೊಳಗೆ ತೀವ್ರ ಅಸ್ವಸ್ಥಗೊಂಡ ಸ್ಥಿತಿಯಲ್ಲಿದ್ದರು.
ಅಕ್ಕಪಕ್ಕದವರಿಗೆ ವಿಷಯ ತಿಳಿದು ಕಾರಿನ ಗಾಜನ್ನು ಒಡೆದು ಜಗದೀಶ್ ಅವರನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಸೇರಿಸುವ ವೇಳೆಗೆ ವಿಷ ಸೇವನೆ ಮಾಡಿ 2-3 ಗಂಟೆ ಆಗಿರಬಹುದು ಎಂದು ತಿಳಿದು ಬಂದಿದೆ. ಆರೋಗ್ಯ ಸ್ಥಿತಿ ತುಸು ಗಂಭೀರವಾಗಿದ್ದರೂ ಪ್ರಾಣಾಪಾಯವಿಲ್ಲ ಎಂದು ತಿಳಿದುಬಂದಿದೆ. ಆಸ್ಪತ್ರೆಗೆ ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಇತರ ಜನಪ್ರತಿನಿಧಿಗಳು, ಮುಖಂಡರು ಭೇಟಿ ನೀಡಿದ್ದಾರೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…