ಮಂಗಳೂರು: ಬಜಪೆಯ ಪೇಜಾವರ ಮಾಗಣೆಯ ನೆಲ್ಲಿದಡಿಗುತ್ತು ಕಾಂತೇರಿ ಜುಮಾದಿ ದೈವಸ್ಥಾನದ ಧಾರ್ಮಿಕ ವಿಧಿವಿಧಾನಗಳನ್ನು ಪಾಲಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಂದ ಪೂರಕ ಸ್ಪಂದನೆ ದೊರೆತಿರುವ ಹಿನ್ನೆಲೆಯಲ್ಲಿ ಮಾ.18ರಂದು ನಡೆಸಲು ಉದ್ದೇಶಿಸಿದ ಬಜಪೆ-ನೆಲ್ಲಿದಡಿಗುತ್ತು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಕೈ ಬಿಡಲಾಗಿದೆ.
ಅದರ ಬದಲು ನೆಲ್ಲಿದಡಿ ಗುತ್ತು ಚಾವಡಿಯಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ನೆಲ್ಲಿದಡಿ ಉಳಿಸಿ ಹೋರಾಟ ಸಮಿತಿ ತಿಳಿಸಿದೆ.
ಹೋರಾಟ ಸಮಿತಿ ಮುಖಂಡ ಶ್ರೀಕಾಂತ್ ಶೆಟ್ಟಿ ಕಾರ್ಕಳ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಂಸದ ಬ್ರಿಜೇಶ್ ಚೌಟ ಅವರು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ಈ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿರುವುದರಿಂದ ಪಾದಯಾತ್ರೆಯನ್ನು ಸದ್ಯಕ್ಕೆ ಕೈಬಿಡಲಾಗಿದೆ ಎಂದರು.
ಎಪ್ರಿಲ್ನಲ್ಲಿ ಚಾವಡಿ ನೇಮ ನಡೆಯಲಿದ್ದು, ಸುಮಾರು ಒಂದೂವರೆ ಸಾವಿರ ಮಂದಿ ಪಾಲ್ಗೊಳ್ಳುತ್ತಾರೆ ಎಂದರು. ನೆಲ್ಲಿದಡಿಗುತ್ತು ಗಡಿಪ್ರಧಾನರಾದ ಲಕ್ಷ್ಮಣ ಚೌಟ, ಮುಖಂಡರಾದ ಅಶ್ವಿನ್ ಶೆಟ್ಟಿ, ಶರತ್ ಶೆಟ್ಟಿ ಉಪಸ್ಥಿತರಿದ್ದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…