ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಜನತಾ ದಳ ಮಹಿಳಾ ಘಟಕದ ವತಿಯಿಂದ ಮಾರ್ಚ್ 21 ರಂದು ಮಹಿಳಾ ಸಮಾವೇಶ, ಮಹಿಳಾ ದಿನಾಚರಣೆ ಮತ್ತು ಸಾಮರಸ್ಯ ಸಂಗಮ ಮಂಗಳೂರಲ್ಲಿ ನಡೆಯಲಿದ್ದು ಕಾರ್ಯಕ್ರಮಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಗಮಿಸಲಿದ್ದಾರೆ.
ಮಾರ್ಚ್ 21 ರ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1.30 ರವರೆಗೆ ಕದ್ರಿ ಪಾರ್ಕ್ ಸರ್ಕ್ಯೂಟ್ ಹೌಸ್ ಬಳಿ ಇರುವ ಲಯನ್ಸ್ ಅಶೋಕ ಸೇವಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟಕರಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗಮಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಹಿಳಾ ಘಟಕ ಜಾತ್ಯಾತೀತ ಜನತಾ ದಳದ ರಾಜ್ಯಾಧ್ಯಕ್ಷೆ ಲೀಲಾವತಿ ಆರ್.ಪ್ರಸಾದ್, ಬಿ.ಎಂ. ಫಾರೂಕ್, ರೂತ್ ಮನೋರಮ, ಬಿ.ಬಿ ನಿಂಗಯ್ಯ, ಎಸ್.ಎಲ್ ಭೋಜೇಗೌಡ ಸೇರಿ ಇನ್ನಿತರ ಗಣ್ಯ ಅತಿಥಿಗಳು ಆಗಮಿಸಲಿದ್ದಾರೆ.
ಇನ್ನು ಇದೇ ವೇಳೆ ಕಾರ್ಯಕ್ರಮದಲ್ಲಿ ಪಕ್ಷದಿಂದ ವಿಜೇತರಾದ ಗ್ರಾಮ ಪಂಚಾಯತ್ ಸದಸ್ಯರನ್ನು ಸನ್ಮಾನಿಸಲಾಗುವುದು. ಪತ್ರಿಕಾಗೋಷ್ಠಿಯಲ್ಲಿ ಚೂಡಮಣಿ,ವೀಣಾ ಜಯಂತ ಶೆಟ್ಟಿ, ಶ್ರೀಮಣಿ ಆರ್ ಶೆಟ್ಟಿ, ಕವಿತಾ, ಸುಕನ್ಯಾ ಇನ್ನಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಮಣಿಪಾಲ : MIT ಕಾಲೇಜಿನಲ್ಲಿ 52 ವಿದ್ಯಾರ್ಥಿಗಳಿಗೆ ಕೊರೊನಾ ದೃಢ ; ಕಾಲೇಜು ಕ್ಯಾಂಪಸ್ ಈಗ ಕಂಟೇನ್ಮೆಂಟ್ ಜೋನ್ -Vishwanews24
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…