ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗದಿಂದ ಮಂಗಳೂರು-ಮಂತ್ರಾಲಯ-ಮಂಗಳೂರು ಮಾರ್ಗದಲ್ಲಿ ವೋಲ್ವೋ ಸಾರಿಗೆ ಪ್ರಾರಂಭಿಸಲಾಗುತ್ತಿದೆ.
ಸಾರ್ವಜನಿಕ ಪ್ರಯಾಣಿಕರ ಹಾಗೂ ಭಕ್ತಾಧಿಗಳ ಅನುಕೂಲಕ್ಕಾಗಿ ಅತ್ಯಂತ ಕಡಿಮೆ ದರದಲ್ಲಿ ಮಂಗಳೂರು-ಮಂತ್ರಾಲಯ-ಮಂಗಳೂರು ವಯಾ ಉಡುಪಿ-ಕುಂದಾಪುರ-ಅಂಪಾರು-ಸಿದ್ದಾಪುರ-ತೀರ್ಥಹಳ್ಳಿ-ಶಿವಮೊಗ್ಗ-ಹೊನ್ನಾಳಿ-ಹರಿಹರ-ಹರಪನಹಳ್ಳಿ-ಹಗರಿಬೊಮ್ಮನಹಳ್ಳಿ- ಹೊಸಪೇಟೆ-ಕುಡುತಿನಿ-ಬಳ್ಳಾರಿ-ಆಲೂರು-ಅದೋನಿ ಮಾರ್ಗದಲ್ಲಿ ಈಗಾಗಲೇ ಕಾರ್ಯಾಚರಿಸುತ್ತಿದ್ದ ನಾನ್ ಎಸಿ ಸ್ಲೀಪರ್ ಸಾರಿಗೆಯನ್ನು ಮೇಲ್ದರ್ಜೇಗೆ ಏರಿಸಿ ಪ್ರತಿಷ್ಠಿತ ವೋಲ್ವೋ ಸಾರಿಗೆಯನ್ನು 2022ರ ಮಾ. 30 ರಿಂದ ಪ್ರಾರಂಭಿಸಲಾಗುತ್ತಿದೆ.
ಈ ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 6 ಗಂಟೆಗೆ ಹೊರಟು ಉಡುಪಿ 7.15-7.20, ಮಣಿಪಾಲ 7.30, ಕುಂದಾಪುರ 8.15, ಹೊಸಪೇಟೆ ಬೆಳಿಗ್ಗೆ 4.30-4.45, ಕುಡುತಿನಿ, ಬಳ್ಳಾರಿ 5.45-6.00,ಆಲೂರು, ಆದೋನಿ ಮಾರ್ಗವಾಗಿ ಮಂತ್ರಾಲಯಕ್ಕೆ ಬೆಳಿಗ್ಗೆ 7.45ಕ್ಕೆ ತಲುಪುವುದು ಹಾಗೂ ಮರು ಪ್ರಯಾಣವು ಮಂತ್ರಾಲಯದಿಂದ ಸಂಜೆ 6.30 ಗಂಟೆಗೆ ಹೊರಟು ಅದೋನಿ, ಆಲೂರು, ಬಳ್ಳಾರಿ 2100-2115, ಕುಡುತಿನಿ, ಹೊಸಪೇಟೆ 2215, ಮಾರ್ಗವಾಗಿ ಮಂಗಳೂರು ಬೆಳಿಗ್ಗೆ 8.15ಕ್ಕೆ ತಲುಪುವುದು.
ಈ ಸಾರಿಗೆಯಲ್ಲಿ ಮಂಗಳೂರಿನಿಂದ ಮಂತ್ರಾಲಯಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 1,150 ರೂ.ಗಳು. ಉಡುಪಿ-ಮಂತ್ರಾಲಯಕ್ಕೆ ಒಟ್ಟು ಪ್ರಯಾಣ ದರ 1,100 ರೂ.ಗಳು ಹಾಗೂ ಕುಂದಾಪುರದಿಂದ-ಮಂತ್ರಾಲಯ ಒಟ್ಟು ಪ್ರಯಾಣದರ 1,050 ರೂ.ಗಳಾಗಿವೆ.
ಈ ಸಾರಿಗೆಗೆ ಅವತಾರ್ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ. ಸಾರ್ವಜನಿಕರು ಹತ್ತಿರದ ರಿಸರ್ವೇಶನ್ ಕೌಂಟರ್ಗೆ ಸಂಪರ್ಕಿಸಬಹುದಾಗಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ- ಮಂಗಳೂರು ಬಸ್ಸು ನಿಲ್ದಾಣ: 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್: 9663211553, ಉಡುಪಿ ಬಸ್ಸು ನಿಲ್ದಾಣ: 9663266400, ಕುಂದಾಪುರ ಬಸ್ಸು ನಿಲ್ದಾಣ: 9663266009, ಮಂತ್ರಾಲಯ ಬಸ್ಸು ನಿಲ್ದಾಣ: 08512279444, ಮಂಗಳೂರು-02ನೇ ಘಟಕ 7760990714/7760990728.
ಸಾರ್ವಜನಿಕ ಪ್ರಯಾಣಿಕರು ಸಾರಿಗೆಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…