Featured

ಮಂಗಳೂರು : ಮಾ. 30 ರಿಂದ ಕೆ.ಎಸ್.ಆರ್.ಟಿ.ಸಿ ವತಿಯಿಂದ  ಮಂತ್ರಾಲಯಕ್ಕೆ ವೋಲ್ವೋ ಸಾರಿಗೆ ಪ್ರಾರಂಭ – Vishwanews24

ಮಂಗಳೂರು : ಕೆ.ಎಸ್.ಆರ್.ಟಿ.ಸಿ ವತಿಯಿಂದ ಮಾ. 30 ರಿಂದ  ಮಂತ್ರಾಲಯಕ್ಕೆ ವೋಲ್ವೋ ಸಾರಿಗೆ ಪ್ರಾರಂಭ – Vishwanews24

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗದಿಂದ ಮಂಗಳೂರು-ಮಂತ್ರಾಲಯ-ಮಂಗಳೂರು ಮಾರ್ಗದಲ್ಲಿ ವೋಲ್ವೋ ಸಾರಿಗೆ ಪ್ರಾರಂಭಿಸಲಾಗುತ್ತಿದೆ.

ಸಾರ್ವಜನಿಕ ಪ್ರಯಾಣಿಕರ ಹಾಗೂ ಭಕ್ತಾಧಿಗಳ ಅನುಕೂಲಕ್ಕಾಗಿ ಅತ್ಯಂತ ಕಡಿಮೆ ದರದಲ್ಲಿ ಮಂಗಳೂರು-ಮಂತ್ರಾಲಯ-ಮಂಗಳೂರು ವಯಾ ಉಡುಪಿ-ಕುಂದಾಪುರ-ಅಂಪಾರು-ಸಿದ್ದಾಪುರ-ತೀರ್ಥಹಳ್ಳಿ-ಶಿವಮೊಗ್ಗ-ಹೊನ್ನಾಳಿ-ಹರಿಹರ-ಹರಪನಹಳ್ಳಿ-ಹಗರಿಬೊಮ್ಮನಹಳ್ಳಿ- ಹೊಸಪೇಟೆ-ಕುಡುತಿನಿ-ಬಳ್ಳಾರಿ-ಆಲೂರು-ಅದೋನಿ ಮಾರ್ಗದಲ್ಲಿ ಈಗಾಗಲೇ ಕಾರ್ಯಾಚರಿಸುತ್ತಿದ್ದ ನಾನ್ ಎಸಿ ಸ್ಲೀಪರ್ ಸಾರಿಗೆಯನ್ನು ಮೇಲ್ದರ್ಜೇಗೆ ಏರಿಸಿ ಪ್ರತಿಷ್ಠಿತ ವೋಲ್ವೋ ಸಾರಿಗೆಯನ್ನು 2022ರ ಮಾ. 30 ರಿಂದ ಪ್ರಾರಂಭಿಸಲಾಗುತ್ತಿದೆ.

ಈ ಸಾರಿಗೆಯು ಮಂಗಳೂರು ಬಸ್ಸು ನಿಲ್ದಾಣದಿಂದ ಸಂಜೆ 6 ಗಂಟೆಗೆ ಹೊರಟು ಉಡುಪಿ 7.15-7.20, ಮಣಿಪಾಲ 7.30, ಕುಂದಾಪುರ 8.15, ಹೊಸಪೇಟೆ ಬೆಳಿಗ್ಗೆ 4.30-4.45, ಕುಡುತಿನಿ, ಬಳ್ಳಾರಿ 5.45-6.00,ಆಲೂರು, ಆದೋನಿ ಮಾರ್ಗವಾಗಿ ಮಂತ್ರಾಲಯಕ್ಕೆ ಬೆಳಿಗ್ಗೆ 7.45ಕ್ಕೆ ತಲುಪುವುದು ಹಾಗೂ ಮರು ಪ್ರಯಾಣವು ಮಂತ್ರಾಲಯದಿಂದ ಸಂಜೆ 6.30 ಗಂಟೆಗೆ ಹೊರಟು ಅದೋನಿ, ಆಲೂರು, ಬಳ್ಳಾರಿ 2100-2115, ಕುಡುತಿನಿ, ಹೊಸಪೇಟೆ 2215, ಮಾರ್ಗವಾಗಿ ಮಂಗಳೂರು ಬೆಳಿಗ್ಗೆ 8.15ಕ್ಕೆ ತಲುಪುವುದು.

ಈ ಸಾರಿಗೆಯಲ್ಲಿ ಮಂಗಳೂರಿನಿಂದ ಮಂತ್ರಾಲಯಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 1,150 ರೂ.ಗಳು. ಉಡುಪಿ-ಮಂತ್ರಾಲಯಕ್ಕೆ ಒಟ್ಟು ಪ್ರಯಾಣ ದರ 1,100 ರೂ.ಗಳು ಹಾಗೂ ಕುಂದಾಪುರದಿಂದ-ಮಂತ್ರಾಲಯ ಒಟ್ಟು ಪ್ರಯಾಣದರ 1,050 ರೂ.ಗಳಾಗಿವೆ.

ಈ ಸಾರಿಗೆಗೆ ಅವತಾರ್‍ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ. ಸಾರ್ವಜನಿಕರು ಹತ್ತಿರದ ರಿಸರ್ವೇಶನ್ ಕೌಂಟರ್‍ಗೆ ಸಂಪರ್ಕಿಸಬಹುದಾಗಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ- ಮಂಗಳೂರು ಬಸ್ಸು ನಿಲ್ದಾಣ: 7760990720, ಮಂಗಳೂರು ಮುಂಗಡ ಬುಕ್ಕಿಂಗ್ ಕೌಂಟರ್: 9663211553, ಉಡುಪಿ ಬಸ್ಸು ನಿಲ್ದಾಣ: 9663266400, ಕುಂದಾಪುರ ಬಸ್ಸು ನಿಲ್ದಾಣ: 9663266009, ಮಂತ್ರಾಲಯ ಬಸ್ಸು ನಿಲ್ದಾಣ: 08512279444, ಮಂಗಳೂರು-02ನೇ ಘಟಕ 7760990714/7760990728.

ಸಾರ್ವಜನಿಕ ಪ್ರಯಾಣಿಕರು ಸಾರಿಗೆಯ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago