ಮಂಗಳೂರು: ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಇಂದು ಬೆಳಗಿನ ವೇಳೆ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ನಡೆದಿದ್ದು, ಬೋಟ್ನಲ್ಲಿದ್ದ 10 ಮೀನುಗಾರರನ್ನು ರಕ್ಷಿಸಲಾಗಿದೆ.
ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಹುಸೈನ್ ಎಂಬವರ ಮಾಲಕತ್ವದ ಬೋಟ್ ಬೆಂಕಿಗಾಹುತಿಯಾಗಿದೆ. ಇಂದು ಬೆಳಗ್ಗಿನ ಜಾವ ಸುಮಾರು 3 ರಿಂದ 4 ಗಂಟೆಯ ವೇಳೆಗೆ ಬೋಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಬೋಟ್ ನಲ್ಲಿದ್ದ ಮೀನುಗಾರರನ್ನು ಇನ್ನೊಂದು ಬೋಟ್ ನಲ್ಲಿದ್ದವರು ರಕ್ಷಿಸಿದ್ದು, ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ನೀಡಿದ ಬೋಟ್ ಮಾಲಕರು, ಭಾನುವಾರ ಬೆಳಗ್ಗೆ 10 ಮಂದಿ ಮೀನುಗಾರರೊಂದಿಗೆ ನಮ್ಮ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಸೋಮವಾರ ಬೆಳಗ್ಗಿನ ಹೊತ್ತು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಧಕ್ಕೆಯಿಂದ ಸುಮಾರು 88 ನಾಟಿಕಲ್ ದೂರದಲ್ಲಿ ಬೋಟ್ ಮುಳುಗಿದೆ. ಜೊತೆಯಲ್ಲಿದ್ದ ಬೋಟ್ ನವರು ಅವಘಡ ಗಮನಿಸಿ ಮೀನುಗಾರರನ್ನು ರಕ್ಷಿಸಿದ್ದಾರೆ ಎಂದು ತಿಳಿಸಿದ್ದಾರೆ.
ಉಡುಪಿ: ನಿರಂತರ ಮಳೆ ; ಜಿಲ್ಲೆಯ ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ಆ.04 (ನಾಳೆ) ರಂದು ರಜೆ ಘೋಷಣೆ ಉಡುಪಿ ಜಿಲ್ಲೆಯಾದ್ಯಂತ…
ಉಳ್ಳಾಲ :ಲೈನ್ ಆಫ್ ಮಾಡದೆ ಟ್ರಾನ್ಸ್ ಫಾರ್ಮರ್ ಏರಿದ ಲೈನ್ ಮೆನ್; ವಿದ್ಯುತ್ ಪ್ರವಹಿಸಿ ಸಾವು ಉಳ್ಳಾಲ : ಜಿಒಎಸ್…
ಸಚಿವ ಸಂಪುಟ ವಿಸ್ತರಣೆ: ಎಸ್.ಮಲ್ಲಿಕಾರ್ಜುನ್ ಸೇರ್ಪಡೆ ; ಮಂಕಾಳ ವೈದ್ಯ ಹೆಸರು ಕೈಬಿಟ್ಟ ಎಐಸಿಸಿ ಬೆಂಗಳೂರು: ಕರ್ನಾಟಕ ಸಚಿವ ಸಂಪುಟ…
ಮಂಗಳೂರು-ಬೆಂಗಳೂರು ರೈಲು ಪ್ರಯಾಣಿಕರೇ ಗಮನಿಸಿ: ಹಲವು ರೈಲುಗಳ ಸಂಚಾರ ಬಂದ್ ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ ಮತ್ತು ಶಿರಿಬಾಗಿಲು…
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…