ಮಂಗಳೂರು : ಬೋಳಾರದಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯು ಆಳಸಮುದ್ರದಲ್ಲಿ ಮಗುಚಿಬಿದ್ದಿದ್ದು ನಾಪತ್ತೆಯಾಗಿದ್ದ ಆರು ಮಂದಿ ಮೀನುಗಾರರ ಪೈಕಿ ಇಬ್ಬರ ಮೃತದೇಹವನ್ನು ಮುಳುಗುತಜ್ಞರು ಮೇಲಕ್ಕೆತ್ತಿದ್ದಾರೆ.
ಮೃತರನ್ನು ಬೊಕ್ಕಪಟ್ನ ನಿವಾಸಿಗಳಾದ ಪಾಂಡುರಂಗ ಸುವರ್ಣ, ಪ್ರೀತಂ (58) ಎಂದು ಗುರುತಿಸಲಾಗಿದೆ. ಇನ್ನು ನಾಪತ್ತೆಯಾದವರನ್ನು ಝಿಯಾವುಲ್ಲ(32), ಅನ್ಸಾರ್ (31), ಹಸೈನಾರ್ (25), ಚಿಂತನ್ (21) ಎಂದು ಹೇಳಲಾಗಿದೆ.
ಸೋಮವಾರ ನಸುಕಿನ ಜಾವ ಬೋಳಾರದ ಶ್ರೀ ರಕ್ಷಾ ಮೀನುಗಾರಿಕಾ ಬೋಟ್ನಲ್ಲಿ 22 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು ರಾತ್ರಿ ವಾಪಾಸ್ ಬರಬೇಕಾಗಿತ್ತು. ಆದರೆ ಉಳ್ಳಾಲದ ಪಶ್ಚಿಮ ಭಾಗದ ಹಲವು ನಾಟಿಕಲ್ ಮೈಲ್ ದೂರದಲ್ಲಿ ದೋಣಿ ಮಗುಚಿ ಬಿದ್ದಿದೆ. 14 ಮಂದಿಯನ್ನು ರಕ್ಷಿಸಲಾಗಿದ್ದು ಆರು ಮಂದಿ ನಾಪತ್ತೆಯಾಗಿದ್ದರು. ಈ ಪೈಕಿ ಇಬ್ಬರ ಮೃತ ದೇಹ ಲಭಿಸಿದೆ. ಇನ್ನುಳಿದ ನಾಲ್ವರಿಗಾಗಿ ಶೋಧ ಕಾರ್ಯ ನಡೆಯುತ್ತಲಿದೆ.
ಮೀನಿನ ಸಂಗ್ರಹ ಅಧಿಕವಾದ ಹಾಗೂ ಭಾರೀ ಗಾಳಿ ಬೀಸಿದ ಪರಿಣಾಮ ಈ ದೋಣಿ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…