Featured

ಮಂಗಳೂರು : ಮುಂದಿನ ಬಾರಿ ಅಧಿಕಾರ ಕಾಂಗ್ರೆಸ್‌ಗೆಂದು ಬಿಜೆಪಿ ನಾಯಕರಿಗೆ ಸ್ಪಷ್ಟವಾಗಿದೆ : ಯು.ಟಿ. ಖಾದರ್‌ -Vishwanews24

ಮಂಗಳೂರು : ಮುಂದಿನ ಬಾರಿ ಅಧಿಕಾರ ಕಾಂಗ್ರೆಸ್‌ಗೆಂದು ಬಿಜೆಪಿ ನಾಯಕರಿಗೆ ಸ್ಪಷ್ಟವಾಗಿದೆ : ಯು.ಟಿ. ಖಾದರ್‌ -Vishwanews24

ಮಂಗಳೂರು : “ಮುಂದಿನ ಬಾರಿ ಅಧಿಕಾರ ಕಾಂಗ್ರೆಸ್‌ಗೆಂದು ಬಿಜೆಪಿ ನಾಯಕರಿಗೆ ಸ್ಪಷ್ಟವಾಗಿದೆ. ಏಕೆಂದರೆ, ಪ್ರಸ್ತುತ ಆಡಳಿತದ ಬಗ್ಗೆ ಅವರೇ ಅಸಮಾಧಾನ ಹೊಂದಿದ್ದಾರೆ” ಎಂದು ಶಾಸಕ ಯು.ಟಿ. ಖಾದರ್‌ ಹೇಳಿದರು.

ಸೋಮವಾರ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಪ್ರಸ್ತುತ ಸರ್ಕಾರಕ್ಕೆ ಸಂಬಂಧಿಸಿದಂತೆ ಜನರ ಮನಸ್ಥಿಯ ಬಗ್ಗೆ ಬಿಜೆಪಿ ನಾಯಕರಿಗೆ ತಿಳಿದಿದೆ. ಬಿಜೆಪಿ ಆಡಳಿತವನ್ನು ನೋಡಿ ಜನರು ಬೇಸತ್ತಿದ್ದಾರೆ. ಒಟ್ಟಾರೆ ನೋಡುವುದಾದರೆ ಈ ಬಾರಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ ಎನ್ನುವುದನ್ನು ಸೂಚಿಸುತ್ತದೆ. ನಾವೆಲ್ಲಾ ಒಗ್ಗಟ್ಟಾಗಿರುವುದರಿಂದ ಬಿಜೆಪಿಗೆ ಕಾಂಗ್ರೆಸ್‌ ನಾಯಕರ ನಡುವೆ ವ್ಯತ್ಯಾಸ ಸೃಷ್ಟಿಸಲು ಅಸಾಧ್ಯ” ಎಂದರು.

“ಪಡಿತರ ಚೀಟಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಜುಲೈ 7ರಂದು ತೊಕ್ಕೊಟ್ಟಿನಲ್ಲಿ ಆಹಾರ ಅದಾಲತ್‌‌ ನಡೆಸಲಾಗುವುದು. ಮಂಗಳೂರು ಕ್ಷೇತ್ರಕ್ಕೆ ಸಂಬಂಧಪಟ್ಟ ಪಂಚಾಯತ್‌ಗಳಿಂದ ಜನರು ಅರ್ಜಿ ತೆಗೆದುಕೊಳ್ಳಬೇಕು. ಬಳಿಕ ಅದನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ” ಎಂದು ತಿಳಿಸಿದರು.

“ಲಾಕ್‌ಡೌನ್‌ನಿಂದ ಸಣ್ಣ ಹಾಗೂ ಮಧ್ಯಮ ಪ್ರಮಾಣದ ಕೈಗಾರಿಕೆಗಳ ಮೇಲೆ ತೀವ್ರವಾದ ಪರಿಣಾಮ ಬೀರಿದೆ. ಈ ವಿಚಾರವನ್ನು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಬ್ಯಾಂಕ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಣ್ಣ ಹಾಗೂ ಮಧ್ಯಮ ಪ್ರಮಾಣದ ಕೈಗಾರಿಕೆಗಳ ನಿರ್ವಹಣೆ ಹಾಗೂ ಅವರ ಸಮಸ್ಯೆಯನ್ನು ಪರಿಹರಿಸಲು ಸಭೆ ಕರೆಯಬೇಕು” ಎಂದು ಹೇಳಿದರು.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

4 minutes ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

31 minutes ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

40 minutes ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

53 minutes ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

5 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

5 hours ago