ಮಂಗಳೂರು : “ಮುಂದಿನ ಬಾರಿ ಅಧಿಕಾರ ಕಾಂಗ್ರೆಸ್ಗೆಂದು ಬಿಜೆಪಿ ನಾಯಕರಿಗೆ ಸ್ಪಷ್ಟವಾಗಿದೆ. ಏಕೆಂದರೆ, ಪ್ರಸ್ತುತ ಆಡಳಿತದ ಬಗ್ಗೆ ಅವರೇ ಅಸಮಾಧಾನ ಹೊಂದಿದ್ದಾರೆ” ಎಂದು ಶಾಸಕ ಯು.ಟಿ. ಖಾದರ್ ಹೇಳಿದರು.
ಸೋಮವಾರ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಪ್ರಸ್ತುತ ಸರ್ಕಾರಕ್ಕೆ ಸಂಬಂಧಿಸಿದಂತೆ ಜನರ ಮನಸ್ಥಿಯ ಬಗ್ಗೆ ಬಿಜೆಪಿ ನಾಯಕರಿಗೆ ತಿಳಿದಿದೆ. ಬಿಜೆಪಿ ಆಡಳಿತವನ್ನು ನೋಡಿ ಜನರು ಬೇಸತ್ತಿದ್ದಾರೆ. ಒಟ್ಟಾರೆ ನೋಡುವುದಾದರೆ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎನ್ನುವುದನ್ನು ಸೂಚಿಸುತ್ತದೆ. ನಾವೆಲ್ಲಾ ಒಗ್ಗಟ್ಟಾಗಿರುವುದರಿಂದ ಬಿಜೆಪಿಗೆ ಕಾಂಗ್ರೆಸ್ ನಾಯಕರ ನಡುವೆ ವ್ಯತ್ಯಾಸ ಸೃಷ್ಟಿಸಲು ಅಸಾಧ್ಯ” ಎಂದರು.
“ಪಡಿತರ ಚೀಟಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಜುಲೈ 7ರಂದು ತೊಕ್ಕೊಟ್ಟಿನಲ್ಲಿ ಆಹಾರ ಅದಾಲತ್ ನಡೆಸಲಾಗುವುದು. ಮಂಗಳೂರು ಕ್ಷೇತ್ರಕ್ಕೆ ಸಂಬಂಧಪಟ್ಟ ಪಂಚಾಯತ್ಗಳಿಂದ ಜನರು ಅರ್ಜಿ ತೆಗೆದುಕೊಳ್ಳಬೇಕು. ಬಳಿಕ ಅದನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಾರೆ” ಎಂದು ತಿಳಿಸಿದರು.
“ಲಾಕ್ಡೌನ್ನಿಂದ ಸಣ್ಣ ಹಾಗೂ ಮಧ್ಯಮ ಪ್ರಮಾಣದ ಕೈಗಾರಿಕೆಗಳ ಮೇಲೆ ತೀವ್ರವಾದ ಪರಿಣಾಮ ಬೀರಿದೆ. ಈ ವಿಚಾರವನ್ನು ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಬ್ಯಾಂಕ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸಣ್ಣ ಹಾಗೂ ಮಧ್ಯಮ ಪ್ರಮಾಣದ ಕೈಗಾರಿಕೆಗಳ ನಿರ್ವಹಣೆ ಹಾಗೂ ಅವರ ಸಮಸ್ಯೆಯನ್ನು ಪರಿಹರಿಸಲು ಸಭೆ ಕರೆಯಬೇಕು” ಎಂದು ಹೇಳಿದರು.
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…