ಮಂಗಳೂರು : ಜಿಲ್ಲೆಯಾದ್ಯಂತ ರಾತ್ರಿಯಿಂದ ಮಳೆಯ ಆರ್ಭಟ ಜೋರಾಗಿದ್ದು, ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಇಂದು ಜಿಲ್ಲೆಯ ಎಲ್ಲಾ ಶಾಲೆ, ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದ್ದು, ವಸತಿ ಪ್ರದೇಶಕ್ಕೆ ನೀರು ನುಗ್ಗಿ ಹಲವೆಡೆ ಹಾನಿ ಸಂಭವಿಸಿದೆ
ನಗರದ ಕುಲಶೇಖರದ ಬಜ್ಜೋಡಿಯಲ್ಲಿ ಕ್ಲಾಡಿ ಲೋಬೊ ಎಂಬವರಿಗೆ ಸೇರಿದ ವರ್ಕ್ ಶಾಪ್ ಗೆ ಮಳೆ ನೀರು ನುಗ್ಗಿದ್ದು, ಬೆಳ್ಳಂಬೆಳಗ್ಗೆ ಚರಂಡಿ ನೀರು ನುಗ್ಗಿದ್ದರಿಂದ ಸಿಬ್ಬಂದಿ ತಮ್ಮ ವಸ್ತುಗಳನ್ನು ರಕ್ಷಿಸಿಕೊಳ್ಳಲು ಪರದಾಡುವಂತಾಗಿದೆ.
ಇನ್ನು ಬಿಕರ್ನಕಟ್ಟೆಯಲ್ಲಿರುವ ಜೆರಾಲ್ಡ್ ಲೋಬೋ ಎಂಬವರ ಮನೆಗೆ ಕಾಂಪೌಡ್ ಕುಸಿದು ಬಿದಿದ್ದು, ಮನೆಗೆ ಹಾನಿಯಾಗಿದೆ.
ಬಿಜೆಪಿ ದ.ಕ ಜಿಲ್ಲೆಯ ಕಚೇರಿ ಮುಂದುಗಡೆಯಿಂದ ಅಲೋಶಿಯಸ್ ಪ.ಪೂ ಕಾಲೇಜು ಕಡೆ ಹೊಗಲು ಇರುವ ಕಚ್ಚಾ ರಸ್ತೆ ಕೈಬರ್ ಪಾಸ್ ಮೇಲ್ಗಡೆ ಕೋರ್ಟ್ ರಸ್ತೆ ಇದ್ದು, ಅದರಲ್ಲಿ ಭೂಕುಸಿತ ಆರಂಭಿಕ ಹಂತದಲ್ಲಿ ಇದ್ದು, ವಕೀಲರು, ಪೋಲಿಸ್, ಹಾಗೂ ಸಾರ್ವಜನಿಕ ಸಾವಿರಾರು ಜನ ವಾಹನದ ಹಾಗೂ ನಡೆದು ಓಡಾಡುವ ಸ್ಥಳವಾಗಿದ್ದು, ದೊಡ್ಡದಾದ ದುರಂತವಾಗುವ ಸೂಚನೆ ಕಾಣುತ್ತಿದ್ದು ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…