Featured

ಮಂಗಳೂರು-ಮುಂಬಯಿ ನಡುವೆ ಇಂಡಿಗೋ ವಿಮಾನ ಸೇವೆ ಆರಂಭ – Vishwnaews24

ಮಂಗಳೂರು-ಮುಂಬಯಿ ನಡುವೆ ಇಂಡಿಗೋ ವಿಮಾನ ಸೇವೆ ಆರಂಭ

ಮಂಗಳೂರು: ಖಾಸಗಿ ರಂಗದ ಇಂಡಿಗೋ ಏರ್‌ಲೈನ್ಸ್‌ ವತಿಯಿಂದ ಮುಂಬಯಿ – ಮಂಗಳೂರು – ಮುಂಬಯಿ ನಡುವೆ ಹೊಸ ವಿಮಾನ ಸೇವೆ ಭಾನುವಾರದಿಂದ ಆರಂಭಗೊಂಡಿದೆ. ಎರಡು ದಿನಗಳ ಕಾಲ ಪ್ರಾಯೋಗಿಕ ಸಂಚಾರ ನಡೆಸಿದ್ದ ವಿಮಾನ ಇನ್ನು ಪ್ರತಿದಿನ ಸಂಚಾರ ನಡೆಸಲಿದೆ.

ವಿಮಾನ ಸಂಖ್ಯೆ 6ಇ-5236 ಮುಂಬಯಿಯಿಂದ ಬೆಳಗ್ಗೆ 8.50ಕ್ಕೆ ಹೊರಟು 10.20ಕ್ಕೆ ಮಂಗಳೂರಿನಲ್ಲಿ ಲ್ಯಾಂಡ್‌ ಆಗಲಿದೆ. 6ಇ -5237 ಬೆಳಗ್ಗೆ 11 ಗಂಟೆಗೆ ಮಂಗಳೂರಿನಿಂದ ಟೇಕಾಫ್‌ ಆಗಿ ಮಧ್ಯಾಹ್ನ 12.40ಕ್ಕೆ ಮುಂಬಯಿಯಲ್ಲಿ ಲ್ಯಾಂಡ್‌ ಆಗಲಿದೆ. ಈ ಹೊಸ ಸೇವೆಗೆ ಇಂಡಿಗೋ ಏರ್‌ಬಸ್‌ ಎ-320 ಮಾದರಿಯ ವಿಮಾನ ಬಳಸುತ್ತಿರುವುದು ವಿಶೇಷವಾಗಿದೆ. ಈ ನಡುವೆ ಇಂಡಿಗೋ ಸಂಸ್ಥೆ ಮಧ್ಯಾಹ್ನ ಬಳಿಕ ಮುಂಬಯಿ- ಮಂಗಳೂರು -ಮುಂಬಯಿ ನಡುವೆ ಸೇವೆ ನೀಡುತ್ತಿದ್ದ 6ಇ -6348/6ಇ 6349 ಸಂಚಾರವನ್ನು ಹಿಂಪಡೆದಿದೆ.

ಶುಕ್ರವಾರದಿಂದ ವಿಮಾನದ ಪ್ರಾಯೋಗಿಕ ಕಾರ್ಯಾಚರಣೆ ಆರಂಭವಾಗಿತ್ತು. ಜೂನ್ 17 ರಂದು ಪ್ರಾಯೋಗಿಕ ವಿಮಾನದಲ್ಲಿ ಎರಡು ಶಿಶುಗಳು ಸೇರಿ 88 ಪ್ರಯಾಣಿಕರು ಮುಂಬೈನಿಂದ ಮಂಗಳೂರಿಗೆ ಹಾರಿದರೆ, 99 ಪ್ರಯಾಣಿಕರು ಮಂಗಳೂರಿನಿಂದ ಮುಂಬೈಗೆ ಹಾರಾಟ ನಡೆಸಿದ್ದರು.

ಭಾನುವಾರ ಸಾಮಾನ್ಯ ವಿಮಾನದ ಮೊದಲ ಕಾರ್ಯಾಚರಣೆಯಲ್ಲಿ 55 ಪ್ರಯಾಣಿಕರು ಮಂಗಳೂರಿಗೆ ಆಗಮಿಸಿದರೆ, ಒಂದು ಶಿಶು ಸೇರಿದಂತೆ 143 ಪ್ರಯಾಣಿಕರು ಮಂಗಳೂರಿನಿಂದ ಮುಂಬಯಿಗೆ ಪ್ರಯಾಣಿಸಿದರು.

ಪ್ರಸ್ತುತ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾರಕ್ಕೆ 108 ದೇಶೀಯ ವಿಮಾನಗಳು ನಿರ್ವಹಣೆಗೊಳ್ಳುತ್ತಿವೆ. ಅದರಲ್ಲಿ ಇಂಡಿಗೋ 85 ವಿಮಾನಗಳನ್ನು ಹೊಂದಿದೆ. ಬೆಂಗಳೂರಿಗೆ 28, ಪುಣೆ ಮೂಲಕ ದಿಲ್ಲಿಗೆ 4, ಚೆನ್ನೈ 7, ಮುಂಬಯಿ 21, ಹೈದರಾಬಾದ್‌ 14, ಬೆಂಗಳೂರು ಮೂಲಕ ಕೋಲ್ಕೊತ್ತಾಗೆ 7 ಮತ್ತು ಹುಬ್ಬಳ್ಳಿಗೆ 4 ವಿಮಾನಗಳು ಸಂಚರಿಸುತ್ತಿವೆ. ಏರ್‌ ಇಂಡಿಯಾ ವಿಮಾನ ಮುಂಬಯಿಗೆ 7, ಸ್ಪೈಸ್‌ ಜೆಟ್‌ ಬೆಂಗಳೂರಿಗೆ 6, ಗೋ ಫಸ್ಟ್‌ ಮುಂಬಯಿಗೆ 7 ಹಾಗೂ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ 3 ವಿಮಾನ ಮುಂಬಯಿಗೆ ಸೇವೆ ನೀಡುತ್ತಿವೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

13 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

13 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

14 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

14 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

15 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

15 hours ago