Featured

ಮಂಗಳೂರು-ಮುಂಬಯಿ ನಡುವೆ ಇಂಡಿಗೋ ವಿಮಾನ ಸೇವೆ ಆರಂಭ – Vishwnaews24

ಮಂಗಳೂರು-ಮುಂಬಯಿ ನಡುವೆ ಇಂಡಿಗೋ ವಿಮಾನ ಸೇವೆ ಆರಂಭ

ಮಂಗಳೂರು: ಖಾಸಗಿ ರಂಗದ ಇಂಡಿಗೋ ಏರ್‌ಲೈನ್ಸ್‌ ವತಿಯಿಂದ ಮುಂಬಯಿ – ಮಂಗಳೂರು – ಮುಂಬಯಿ ನಡುವೆ ಹೊಸ ವಿಮಾನ ಸೇವೆ ಭಾನುವಾರದಿಂದ ಆರಂಭಗೊಂಡಿದೆ. ಎರಡು ದಿನಗಳ ಕಾಲ ಪ್ರಾಯೋಗಿಕ ಸಂಚಾರ ನಡೆಸಿದ್ದ ವಿಮಾನ ಇನ್ನು ಪ್ರತಿದಿನ ಸಂಚಾರ ನಡೆಸಲಿದೆ.

ವಿಮಾನ ಸಂಖ್ಯೆ 6ಇ-5236 ಮುಂಬಯಿಯಿಂದ ಬೆಳಗ್ಗೆ 8.50ಕ್ಕೆ ಹೊರಟು 10.20ಕ್ಕೆ ಮಂಗಳೂರಿನಲ್ಲಿ ಲ್ಯಾಂಡ್‌ ಆಗಲಿದೆ. 6ಇ -5237 ಬೆಳಗ್ಗೆ 11 ಗಂಟೆಗೆ ಮಂಗಳೂರಿನಿಂದ ಟೇಕಾಫ್‌ ಆಗಿ ಮಧ್ಯಾಹ್ನ 12.40ಕ್ಕೆ ಮುಂಬಯಿಯಲ್ಲಿ ಲ್ಯಾಂಡ್‌ ಆಗಲಿದೆ. ಈ ಹೊಸ ಸೇವೆಗೆ ಇಂಡಿಗೋ ಏರ್‌ಬಸ್‌ ಎ-320 ಮಾದರಿಯ ವಿಮಾನ ಬಳಸುತ್ತಿರುವುದು ವಿಶೇಷವಾಗಿದೆ. ಈ ನಡುವೆ ಇಂಡಿಗೋ ಸಂಸ್ಥೆ ಮಧ್ಯಾಹ್ನ ಬಳಿಕ ಮುಂಬಯಿ- ಮಂಗಳೂರು -ಮುಂಬಯಿ ನಡುವೆ ಸೇವೆ ನೀಡುತ್ತಿದ್ದ 6ಇ -6348/6ಇ 6349 ಸಂಚಾರವನ್ನು ಹಿಂಪಡೆದಿದೆ.

ಶುಕ್ರವಾರದಿಂದ ವಿಮಾನದ ಪ್ರಾಯೋಗಿಕ ಕಾರ್ಯಾಚರಣೆ ಆರಂಭವಾಗಿತ್ತು. ಜೂನ್ 17 ರಂದು ಪ್ರಾಯೋಗಿಕ ವಿಮಾನದಲ್ಲಿ ಎರಡು ಶಿಶುಗಳು ಸೇರಿ 88 ಪ್ರಯಾಣಿಕರು ಮುಂಬೈನಿಂದ ಮಂಗಳೂರಿಗೆ ಹಾರಿದರೆ, 99 ಪ್ರಯಾಣಿಕರು ಮಂಗಳೂರಿನಿಂದ ಮುಂಬೈಗೆ ಹಾರಾಟ ನಡೆಸಿದ್ದರು.

ಭಾನುವಾರ ಸಾಮಾನ್ಯ ವಿಮಾನದ ಮೊದಲ ಕಾರ್ಯಾಚರಣೆಯಲ್ಲಿ 55 ಪ್ರಯಾಣಿಕರು ಮಂಗಳೂರಿಗೆ ಆಗಮಿಸಿದರೆ, ಒಂದು ಶಿಶು ಸೇರಿದಂತೆ 143 ಪ್ರಯಾಣಿಕರು ಮಂಗಳೂರಿನಿಂದ ಮುಂಬಯಿಗೆ ಪ್ರಯಾಣಿಸಿದರು.

ಪ್ರಸ್ತುತ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಾರಕ್ಕೆ 108 ದೇಶೀಯ ವಿಮಾನಗಳು ನಿರ್ವಹಣೆಗೊಳ್ಳುತ್ತಿವೆ. ಅದರಲ್ಲಿ ಇಂಡಿಗೋ 85 ವಿಮಾನಗಳನ್ನು ಹೊಂದಿದೆ. ಬೆಂಗಳೂರಿಗೆ 28, ಪುಣೆ ಮೂಲಕ ದಿಲ್ಲಿಗೆ 4, ಚೆನ್ನೈ 7, ಮುಂಬಯಿ 21, ಹೈದರಾಬಾದ್‌ 14, ಬೆಂಗಳೂರು ಮೂಲಕ ಕೋಲ್ಕೊತ್ತಾಗೆ 7 ಮತ್ತು ಹುಬ್ಬಳ್ಳಿಗೆ 4 ವಿಮಾನಗಳು ಸಂಚರಿಸುತ್ತಿವೆ. ಏರ್‌ ಇಂಡಿಯಾ ವಿಮಾನ ಮುಂಬಯಿಗೆ 7, ಸ್ಪೈಸ್‌ ಜೆಟ್‌ ಬೆಂಗಳೂರಿಗೆ 6, ಗೋ ಫಸ್ಟ್‌ ಮುಂಬಯಿಗೆ 7 ಹಾಗೂ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ 3 ವಿಮಾನ ಮುಂಬಯಿಗೆ ಸೇವೆ ನೀಡುತ್ತಿವೆ.

Vishwa News 24

Recent Posts

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ – vishwanews24

ಶಾಸಕರು ರಾಜೀನಾಮೆ ನೀಡಿದರೆ ಎರಡೇ ನಿಮಿಷದಲ್ಲಿ ಅಂಗೀಕಾರ : ರಾಜೀನಾಮೆ ನೀಡುವ ಶಾಸಕರಿಗೆ ಸಿಎಂ ಖಡಕ್ ವಾರ್ನಿಂಗ್ ಬೆಂಗಳೂರು: ಶಾಸಕರು…

24 minutes ago

ರಾಜ್ಯದ ಅತಿವೃಷ್ಟಿ / ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ: ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ – vishwanews24

ರಾಜ್ಯದ ಬರ ಪರಿಸ್ಥಿತಿ ಅಧ್ಯಯನಕ್ಕೆ ಸಚಿವರಿಗೆ ಜಿಲ್ಲೆಗಳ ಹೊಣೆ : ತಕ್ಷಣ ಪ್ರವಾಸಕ್ಕೆ ಸಿಎಂ ಸೂಚನೆ ಬೆಂಗಳೂರು: ರಾಜ್ಯದಲ್ಲಿನ ಅತಿವೃಷ್ಟಿ /…

31 minutes ago

ಕುಂದಾಪುರ:  ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ – vishwanews24

ಕುಂದಾಪುರ:  ದಿನಸಿ ಅಂಗಡಿಯಲ್ಲಿ ಭಾರೀ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಡೀ ದಿನಸಿ…

40 minutes ago

ನಟಿ ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ : ಉದಯನಿಧಿ ಸ್ಟಾಲಿನ್ ಬಂಧನ – vishwanews24

ತ್ರಿಷಾ ವಿರುದ್ಧ ವಿವಾದಾತ್ಮಕ ಹೇಳಿಕೆ : ಉದಯನಿಧಿ ಸ್ಟಾಲಿನ್ ಬಂಧನ ಚೆನ್ನೈ: ನಟಿ ತ್ರಿಷಾ  ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ…

46 minutes ago

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು – vishwanews24

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ; ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ನಿಷೇಧಿತ ಮಾದಕ…

60 minutes ago

ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ – vishwanews24

ಕಾಪು: ಜಿಲ್ಲಾಧಿಕಾರಿಗಳಿಂದ ಕಡಲ್ಕೊರೆತ ಪರಿಶೀಲನೆ: ತುರ್ತು ಕಾಮಗಾರಿಗೆ 2 ಕೋ. ರೂ. ಬಿಡುಗಡೆ ಉಡುಪಿ: ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ,…

1 hour ago