ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ಅವಕಾಶವಿಲ್ಲ ಎಂಬುದಾಗಿ ವಿಶ್ವ ಹಿಂದು ಪರಿಷತ್-ಬಜರಂಗದಳದಿಂದ ಅಳವಡಿಸಲಾಗಿದ್ದ ಬ್ಯಾನರ್ನ್ನು ಪೊಲೀಸರು ಗುರುವಾರ ತೆರವುಗೊಳಿಸಿದ್ದಾರೆ.
ಜನವರಿ 15ರಿಂದ 21ರವರೆಗೆ ಕದ್ರಿ ಜಾತ್ರೆ ನಡೆಯಲಿದೆ. ಆದರೆ ಈ ಜಾತ್ರೆಯಲ್ಲಿ ಸನಾತನ ಧರ್ಮದ ಹಾಗೂ ಆಚರಣೆಯಲ್ಲಿ ನಂಬಿಕೆ ಹಾಗೂ ವಿಶ್ವಾಸ ಉಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶವಿದೆ ಎಂದು ಗುರುವಾರ ಕ್ಷೇತ್ರದ ಬಳಿ ಬ್ಯಾನರ್ ಹಾಕಲಾಗಿದೆ.
ಇನ್ನು ಕುಕ್ಕರ್ ಬಾಂಬ್ ಸ್ಪೋಟದ ಆರೋಪಿ ಮೊದಲು ಗುರಿ ಮಾಡಿದ್ದೇ ಕದ್ರಿ ಮಂಜುನಾಥ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಇರುವವರಿಗೆ ಹಾಗೂ ವಿಗ್ರಹಾರಾಧನೆಯನ್ನು ಹರಾಮ್ ಎಂದು ನಂಬಿರುವವರಿಗೆ ಈ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ ಎಂದೂ ಬ್ಯಾನರ್ನಲ್ಲಿ ಬರೆಯಲಾಗಿತ್ತು.
ಕದ್ರಿ ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆಗೆ ಸೇರಿರುವುದರಿಂದ ಬ್ಯಾನರ್ ಅಳವಡಿಕೆಗೆ ಆಡಳಿತ ಮಂಡಳಿಯ ಅನುಮತಿ ಇರಲಿಲ್ಲ. ಹೀಗಾಗಿ ಶಾಂತಿ, ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬ್ಯಾನರ್ನ್ನು ಪೊಲೀಸರು ತೆರವುಗೊಳಿಸಿದ್ದಾರೆ. ಇನ್ನು ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಉಡುಪಿ ರಜತಮಹೋತ್ಸವ : ಮಲ್ಪೆ ಕಡಲ ಕಿನಾರೆಯಲ್ಲಿ ಸಮಾರಂಭ – Vishwanews24
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…