Featured

ಮಂಗಳೂರು : ಮುಸ್ಲಿಂ ಸಮುದಾಯಕ್ಕೆ ಬೈದರೆ ಪ್ರಮೋಶನ್‌ ಸಿಗದು, ಅಂತಹ ಕನಸು ಕಾಣುವುದು ಬೇಡ : ಈಶ್ವರಪ್ಪ ಗೆ ಎಂ. ಎಸ್‌. ಮುಹಮ್ಮದ್‌ -Vishwanews24

ಮಂಗಳೂರು : ಶ್ರೀರಾಮ ಸೇನೆ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಸಚಿವ ಈಶ್ವರಪ್ಪ ಮುಸ್ಲಿಂ ಸಮುದಾಯದ ವಿರುದ್ಧ ಮಾತನಾಡಿದ್ದಾರೆ. ಇದನ್ನು ಅಲ್ಪಸಂಖ್ಯಾತರು ಖಂಡಿಸುತ್ತಿದ್ದು, ಈ ಚಾಳಿ ಮುಂದುವರಿಸಿದರೆ ಈಶ್ವರಪ್ಪ ಅವರು ಜಿಲ್ಲೆಗೆ ಬರುವಾಗ ಮುಸ್ಲಿಂ ಸಮುದಾಯ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಲ್ಪ ಸಂಖ್ಯಾತ ಮುಖಂಡ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ. ಎಸ್‌. ಮುಹಮ್ಮದ್‌ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾಕಾಂಗ್ರೆಸ್‌ ಕಚೇರಿಯಲ್ಲಿಮಂಗಳವಾರ ನಡೆದ ಸುದ್ದಿಗೋಷ್ಟಿಯ ಮಾತನಾಡಿದ ಅವರು ಮುಸ್ಲಿಂ ಸಮುದಾಯದ ವಿರುದ್ಧದ ಹೇಳಿಕೆಗಳು ಈಶ್ವರಪ್ಪನವರಿಂದ ಇದೇ ಮೊದಲಲ್ಲ. ಈ ಹಿಂದೆಯೂ ಕಚೇರಿ ಗುಡಿಸಿದ ಮುಸ್ಲಿಂ ಸಮುದಾಯದವರಿಗೆ ಮಾತ್ರ ಬಿಜೆಪಿ ಟಿಕೆಟ್‌ ಎಂದು ಹೇಳಿಕೆ ನೀಡಿದ್ದರು. ಅಂತಹ ಟಿಕೆಟ್‌ ನಮಗೆ ಬೇಕಾಗಿಲ್ಲಎಂದರು.

ದೇಶಪ್ರೇಮದ ಪಾಠ ನಾವು ಈಶ್ವರಪ್ಪರಿಂದ ಕಲಿಯಬೇಕಾಗಿಲ್ಲ. ಪಾಕಿಸ್ತಾನಕ್ಕೆ ಅವರು ಬೇಕಾದರೆ ಹೋಗಲಿ. ನವಾಝ್‌ ಶರೀಫ್‌ ಅವರ ಮಗಳ ಹುಟ್ಟುಹಬ್ಬಕ್ಕೆ ಆಮಂತ್ರಣವಿಲ್ಲದೆ ಹೋಗಿದ್ದು ಪ್ರಧಾನಿ ನರೇಂದ್ರ ಮೋದಿ. ಅವರ ಬಗ್ಗೆ ಈಶ್ವರಪ್ಪ ಮಾತನಾಡಲಿ. ಜಾತ್ಯತೀತ ಸಿದ್ಧಾಂತಕ್ಕೆ ನಾವು ಎಂದೂ ಬದ್ಧ ಎಂದರು.

ಕಾಂಗ್ರೆಸ್‌ ಮುಖಂಡ, ಜಿಪಂ ಸದಸ್ಯ ಶಾಹುಲ… ಹಮೀದ್‌ ಮಾತನಾಡಿ, ಈಶ್ವರಪ್ಪ  ಮಾನಸಿಕ ಸ್ಥಿಮಿತ ಕಳೆದುಕೊಂಡು ಏನೇನೋ ಮಾತನಾಡುತ್ತಿದ್ದಾರೆ. ಸಚಿವ ಈಶ್ವರಪ್ಪ ಭ್ರಷ್ಟಾಚಾರಿ ಅನ್ನುವುದು ಗೊತ್ತು, ಆದರೆ ಇದೀಗ ಮುಸ್ಲಿಂ ಸಮುದಾಯ ಅವಮಾನಿಸುವ ಮೂಲಕ ಅವರ ಮನಸ್ಥಿತಿಯನ್ನು ಎಲ್ಲರಿಗೂ ಗೊತ್ತುಪಡಿಸಿದ್ದಾರೆ ಎಂದರು. ರಾಜ್ಯದಲ್ಲಿಬಿಜೆಪಿಗೆ ಶೇ.36 ಮಂದಿ ಮಾತ್ರ ಮತ ಹಾಕಿದ್ದಾರೆ. ಹಾಗಿದ್ದರೆ ಉಳಿದವರೆಲ್ಲರೂ ದೇಶದ್ರೋಹಿಗಳೇ ಎಂದು ಶಾಹುಲ್‌ ಪ್ರಶ್ನಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಸಿಟಿ ರವಿಯವರು ಯಾವತ್ತೂ ಮುಸ್ಲಿಂರ ಬಗ್ಗೆ ಈ ರೀತಿ ಮಾತನಾಡುವುದಿಲ್ಲ. ಯಾಕೆಂದರೆ ಅವರಿಗೆ ಮುಸ್ಲಿಂ ಬಂಧುಗಳು ಇದ್ದಾರೆ. ರಾಜಕೀಯ ಬದುಕು ಯಾರಿಗೂ ಶಾಶ್ವತವಲ್ಲ. ಇದ್ದಷ್ಟು ಸಮಯ ಸೌಹಾರ್ದದಿಂದ ಬದುಕುವುದನ್ನು ಕಲಿಯಬೇಕು. ಮುಸ್ಲಿಂ ಸಮುದಾಯಕ್ಕೆ ಬೈದರೆ ಪ್ರಮೋಶನ್‌ ಸಿಗದು, ಅಂತಹ ಕನಸು ಕಾಣುವುದು ಬೇಡ. ನಮಗೂ ಮಾತನಾಡಲು ಗೊತ್ತಿದೆ. ಆದರೆ ಕಾಂಗ್ರೆಸ್ಸಿಗರು ಶಾಂತಿ ಪ್ರಿಯರು. ನಿಮ್ಮ ಮಾತಿನ ಮಟ್ಟಕ್ಕೆ ನಾವು ಇಳಿಯುವುದಿಲ್ಲಎಂದು ಶಾಹುಲ… ಹಮೀದ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿಜಿ.ಪಂ. ಸದಸ್ಯ ಯು.ಪಿ. ಇಬ್ರಾಹಿಂ, ಮಾಜಿ ಕಾರ್ಪೊರೇಟರ್‌ ಅಬ್ದುಲ್‌ ರವೂಫ್‌, ಎನ್‌ಎಸ್‌ಯುಐನ ಸವದ್‌ ಉಪಸ್ಥಿತರಿದ್ದರು.

Vishwa News 24

Recent Posts

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

11 hours ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

11 hours ago

ಬಿಜೆಪಿಯಿಂದ ಅಧಿವೇಶನಕ್ಕೆ ಅಡ್ಡಿ ಹಿಂದೆ ಹಿಡನ್ ಅಜೆಂಡಾ: ಯು.ಟಿ.ಖಾದರ್ ಆರೋಪ – vishwanews24

ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…

11 hours ago

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ – ನಾಲ್ವರು ಮೀನುಗಾರರ ರಕ್ಷಣೆ – vishwanews24

ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…

12 hours ago

ಮಂಗಳೂರು: ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ : ಸಚಿವ ಯು.ಟಿ.ಖಾದರ್ – vishwanews24

ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್‌, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್‌ಟೀಮ್ :…

15 hours ago

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  – vishwanews24

ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು  ಪುತ್ತೂರು: ಹಲವು…

15 hours ago