Featured

ಮಂಗಳೂರು : ಮುಸ್ಲಿಂ ಸಮುದಾಯಕ್ಕೆ ಬೈದರೆ ಪ್ರಮೋಶನ್‌ ಸಿಗದು, ಅಂತಹ ಕನಸು ಕಾಣುವುದು ಬೇಡ : ಈಶ್ವರಪ್ಪ ಗೆ ಎಂ. ಎಸ್‌. ಮುಹಮ್ಮದ್‌ -Vishwanews24

ಮಂಗಳೂರು : ಶ್ರೀರಾಮ ಸೇನೆ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಸಚಿವ ಈಶ್ವರಪ್ಪ ಮುಸ್ಲಿಂ ಸಮುದಾಯದ ವಿರುದ್ಧ ಮಾತನಾಡಿದ್ದಾರೆ. ಇದನ್ನು ಅಲ್ಪಸಂಖ್ಯಾತರು ಖಂಡಿಸುತ್ತಿದ್ದು, ಈ ಚಾಳಿ ಮುಂದುವರಿಸಿದರೆ ಈಶ್ವರಪ್ಪ ಅವರು ಜಿಲ್ಲೆಗೆ ಬರುವಾಗ ಮುಸ್ಲಿಂ ಸಮುದಾಯ ಕಪ್ಪು ಬಾವುಟ ಪ್ರದರ್ಶನ ಮಾಡಿ ಪ್ರತಿಭಟಿಸಲಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಲ್ಪ ಸಂಖ್ಯಾತ ಮುಖಂಡ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಎಂ. ಎಸ್‌. ಮುಹಮ್ಮದ್‌ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾಕಾಂಗ್ರೆಸ್‌ ಕಚೇರಿಯಲ್ಲಿಮಂಗಳವಾರ ನಡೆದ ಸುದ್ದಿಗೋಷ್ಟಿಯ ಮಾತನಾಡಿದ ಅವರು ಮುಸ್ಲಿಂ ಸಮುದಾಯದ ವಿರುದ್ಧದ ಹೇಳಿಕೆಗಳು ಈಶ್ವರಪ್ಪನವರಿಂದ ಇದೇ ಮೊದಲಲ್ಲ. ಈ ಹಿಂದೆಯೂ ಕಚೇರಿ ಗುಡಿಸಿದ ಮುಸ್ಲಿಂ ಸಮುದಾಯದವರಿಗೆ ಮಾತ್ರ ಬಿಜೆಪಿ ಟಿಕೆಟ್‌ ಎಂದು ಹೇಳಿಕೆ ನೀಡಿದ್ದರು. ಅಂತಹ ಟಿಕೆಟ್‌ ನಮಗೆ ಬೇಕಾಗಿಲ್ಲಎಂದರು.

ದೇಶಪ್ರೇಮದ ಪಾಠ ನಾವು ಈಶ್ವರಪ್ಪರಿಂದ ಕಲಿಯಬೇಕಾಗಿಲ್ಲ. ಪಾಕಿಸ್ತಾನಕ್ಕೆ ಅವರು ಬೇಕಾದರೆ ಹೋಗಲಿ. ನವಾಝ್‌ ಶರೀಫ್‌ ಅವರ ಮಗಳ ಹುಟ್ಟುಹಬ್ಬಕ್ಕೆ ಆಮಂತ್ರಣವಿಲ್ಲದೆ ಹೋಗಿದ್ದು ಪ್ರಧಾನಿ ನರೇಂದ್ರ ಮೋದಿ. ಅವರ ಬಗ್ಗೆ ಈಶ್ವರಪ್ಪ ಮಾತನಾಡಲಿ. ಜಾತ್ಯತೀತ ಸಿದ್ಧಾಂತಕ್ಕೆ ನಾವು ಎಂದೂ ಬದ್ಧ ಎಂದರು.

ಕಾಂಗ್ರೆಸ್‌ ಮುಖಂಡ, ಜಿಪಂ ಸದಸ್ಯ ಶಾಹುಲ… ಹಮೀದ್‌ ಮಾತನಾಡಿ, ಈಶ್ವರಪ್ಪ  ಮಾನಸಿಕ ಸ್ಥಿಮಿತ ಕಳೆದುಕೊಂಡು ಏನೇನೋ ಮಾತನಾಡುತ್ತಿದ್ದಾರೆ. ಸಚಿವ ಈಶ್ವರಪ್ಪ ಭ್ರಷ್ಟಾಚಾರಿ ಅನ್ನುವುದು ಗೊತ್ತು, ಆದರೆ ಇದೀಗ ಮುಸ್ಲಿಂ ಸಮುದಾಯ ಅವಮಾನಿಸುವ ಮೂಲಕ ಅವರ ಮನಸ್ಥಿತಿಯನ್ನು ಎಲ್ಲರಿಗೂ ಗೊತ್ತುಪಡಿಸಿದ್ದಾರೆ ಎಂದರು. ರಾಜ್ಯದಲ್ಲಿಬಿಜೆಪಿಗೆ ಶೇ.36 ಮಂದಿ ಮಾತ್ರ ಮತ ಹಾಕಿದ್ದಾರೆ. ಹಾಗಿದ್ದರೆ ಉಳಿದವರೆಲ್ಲರೂ ದೇಶದ್ರೋಹಿಗಳೇ ಎಂದು ಶಾಹುಲ್‌ ಪ್ರಶ್ನಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಸಿಟಿ ರವಿಯವರು ಯಾವತ್ತೂ ಮುಸ್ಲಿಂರ ಬಗ್ಗೆ ಈ ರೀತಿ ಮಾತನಾಡುವುದಿಲ್ಲ. ಯಾಕೆಂದರೆ ಅವರಿಗೆ ಮುಸ್ಲಿಂ ಬಂಧುಗಳು ಇದ್ದಾರೆ. ರಾಜಕೀಯ ಬದುಕು ಯಾರಿಗೂ ಶಾಶ್ವತವಲ್ಲ. ಇದ್ದಷ್ಟು ಸಮಯ ಸೌಹಾರ್ದದಿಂದ ಬದುಕುವುದನ್ನು ಕಲಿಯಬೇಕು. ಮುಸ್ಲಿಂ ಸಮುದಾಯಕ್ಕೆ ಬೈದರೆ ಪ್ರಮೋಶನ್‌ ಸಿಗದು, ಅಂತಹ ಕನಸು ಕಾಣುವುದು ಬೇಡ. ನಮಗೂ ಮಾತನಾಡಲು ಗೊತ್ತಿದೆ. ಆದರೆ ಕಾಂಗ್ರೆಸ್ಸಿಗರು ಶಾಂತಿ ಪ್ರಿಯರು. ನಿಮ್ಮ ಮಾತಿನ ಮಟ್ಟಕ್ಕೆ ನಾವು ಇಳಿಯುವುದಿಲ್ಲಎಂದು ಶಾಹುಲ… ಹಮೀದ್‌ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿಜಿ.ಪಂ. ಸದಸ್ಯ ಯು.ಪಿ. ಇಬ್ರಾಹಿಂ, ಮಾಜಿ ಕಾರ್ಪೊರೇಟರ್‌ ಅಬ್ದುಲ್‌ ರವೂಫ್‌, ಎನ್‌ಎಸ್‌ಯುಐನ ಸವದ್‌ ಉಪಸ್ಥಿತರಿದ್ದರು.

Vishwa News 24

Recent Posts

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 hour ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 hour ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

2 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

2 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago