Featured

ಮಂಗಳೂರು:  ಮುಸ್ಲಿಂ ಹತ್ಯೆಗೈದಾಗ ಗಲಾಟೆ ಆಗ್ಲಿಲ್ಲ, ಹಿಂದೂ ಹತ್ಯೆಯಾಗಿದ್ರೆ ಬೆಂಕಿ ಹಚ್ಚಿರೋರು: ದಿನೇಶ್ ಗುಂಡೂರಾವ್ – Vishwanews24

ಬಿಜೆಪಿ ಬುದ್ದಿವಂತಿಕೆಯಿಂದ ಧರ್ಮದ ಹೆಸರಲ್ಲಿ ತಂದಿಡುತ್ತಿದ್ದಾರೆ..

ಜಿಲ್ಲೆಯಲ್ಲಿ ಆರ್ ಎಸ್‍ಎಸ್, ಭಜರಂಗದಳ ಪ್ರಚೋದನೆ ಮಾಡುತ್ತಿದೆ.

ಕಾರಣ ಯಾವುದೇ  ಇರಲಿ, ಹಿಂದೂ ಮುಸ್ಲಿಂ ಇದ್ರೆ ಅರ್ಥ ಬೇರೆಯೇ ಆಗಿರುತ್ತದೆ..

ಸಹೋದರತ್ವ ಮತ್ತು ಕೋಮು ಸೌಹಾರ್ದ ನಮಗೆ ಮುಖ್ಯ,..

ಮಂಗಳೂರು: ಕೊಡಗಿನಲ್ಲಿ ಇತ್ತೀಚೆಗೆ ಒಬ್ಬ ಹಿಂದೂ ಚುಚ್ಚಿದ ಕಾರಣ ಒಬ್ಬ ಮುಸ್ಲಿಂ ತೀರಿ ಹೋದ, ಅದು ದೊಡ್ಡ ಗಲಾಟೆ ಆಗಿಲ್ಲ. ಅದು ವೈಯಕ್ತಿಕ ಕಾರಣದಿಂದ ಆಗಿದ್ದು. ಯಾವುದೋ ಸಂದರ್ಭದಲ್ಲಿ ಕೊಲೆ ಆಯ್ತು. ನಮ್ಮ ಅದೃಷ್ಟ ಏನಂದ್ರೆ ಹಿಂದೂ ತೀರಿ ಹೋಗಿದ್ರೆ ಇಡೀ ಊರಿಗೆ ಬೆಂಕಿ ಹಚ್ಚಿರೋರು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ, ನೈತಿಕ ಪೊಲೀಸ್‍ಗಿರಿ ವಿಚಾರವಾಗಿ ಮಾತನಾಡಿದ್ದಾರೆ. ಈ ವೇಳೆ ಯಾವುದೇ ಕಾರಣ ಇರಲಿ, ಹಿಂದೂ ಮುಸ್ಲಿಂ ಇದ್ರೆ ಇವರಿಗೆ ಅರ್ಥ ಬೇರೆಯೇ ಆಗಿರುತ್ತದೆ. ಯಾರೇ ಕಾನೂನನ್ನು ಕೈಗೆತ್ತಿಕೊಂಡರೂ ಕ್ರಮ ಆಗುತ್ತದೆ. ಇತ್ತೀಚೆಗೆ ಮೂರು ಜನರ ಬಂಧನ ಆಗಿದೆ. ಇದು ಜಿಲ್ಲೆಗೆ ಕೆಟ್ಟ ಹೆಸರು, ಇಡೀ ದಕ್ಷಿಣ ಕನ್ನಡಕ್ಕೆ ಇದು ಕಳಂಕ. ಇದೇ ಕಾರಣಕ್ಕೆ ಇವತ್ತು ಬೇರೆ ಜನರು ಇಲ್ಲಿಗೆ ಬರುತ್ತಿಲ್ಲ. ಈ ಕಳಂಕದಿಂದ ಜಿಲ್ಲೆ ಹೊರ ಬರಬೇಕು. ಸುರಕ್ಷಿತ ವಾತಾವರಣ ಸೃಷ್ಟಿಯಾಗಬೇಕು ಎಂದಿದ್ದಾರೆ.

ಜಿಲ್ಲೆಯಲ್ಲಿ ಆರ್‍ಎಸ್‍ಎಸ್, ಭಜರಂಗದಳ ಪ್ರಚೋದನೆ ಮಾಡುತ್ತಿದೆ. ಇವರ ಪ್ರಚೋದನೆಯಲ್ಲಿ ಇವರು ಹೇಳಿದ್ದೇ ನಡೀಬೇಕು ಎಂದುಕೊಂಡಿದ್ದಾರೆ. ಇದು ಹಿಂದೂ ದೇಶ, ಹಿಂದುತ್ವ ಎನ್ನುತ್ತಿದ್ದಾರೆ. ಆಂಟಿ ಕಮ್ಯನಲ್ ವಿಂಗ್ ಫೆಲ್ಯೂರ್ ಅಲ್ಲ, ಅವರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಸಹೋದರತ್ವ ಮತ್ತು ಕೋಮು ಸೌಹಾರ್ದ ನಮಗೆ ಮುಖ್ಯ ಎಂದು ಅವರು ಹೇಳಿದ್ದಾರೆ.

ಬಿಜೆಪಿಯ ಅನಂತ್ ಕುಮಾರ್, ನಳಿನ್‍ಕುಮಾರ್ ಕಟೀಲ್, ಸುನೀಲ್ ಕುಮಾರ್‍ಗೆ ದ್ವೇಷವೇ ಬಂಡವಾಳವಾಗಿದೆ. ಬಿಜೆಪಿಯವರದ್ದು ಹೆದರಿಸೋದು ಮತ್ತು ಸರ್ವಾಧಿಕಾರ. ವಿರೋಧ ಪಕ್ಷ ರಹಿತ ದೇಶ ಮಾಡಲು ಬಿಜೆಪಿ (BJP) ಹೊರಟಿದೆ. ಏಕಪಕ್ಷೀಯ ದೇಶ ಮತ್ತು ಒಬ್ಬನೇ ನಾಯಕ ಇರಬೇಕು ಎಂದುಕೊಂಡಿದ್ದಾರೆ. ಈ ತರಹದ ಪ್ರಜಾಪ್ರಭುತ್ವ ಈ ದೇಶಕ್ಕೆ ಒಳ್ಳೆಯದಲ್ಲ. ಬಹಳ ಬುದ್ದಿವಂತಿಕೆಯಿಂದ ಧರ್ಮದ ಹೆಸರಲ್ಲಿ ತಂದಿಡುತ್ತಿದ್ದಾರೆ. ಈ ದೇಶದ ಸಮಸ್ಯೆ ಬಗ್ಗೆ ನರೇಂದ್ರ ಮೋದಿ ಮಾತನಾಡಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

2 hours ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

3 hours ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

3 hours ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

3 hours ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

3 hours ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

4 hours ago