ಮಂಗಳೂರು: ನಗರದ ಹೊರವಲಯದ ಬೋಳಿಯಾರ್ನಲ್ಲಿ ವಿಜಯೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದು, ಭಾರತ್ ಮಾತಾ ಕೀ ಜೈ ಅಂದಿದ್ದಕ್ಕೆ ಎಫ್ಐಆರ್ ದಾಖಲಿಸಲಾಗಿದೆಯೆಂದು ಗುಮಾನಿ ಹಬ್ಬಿಸಲಾಗಿದೆ. ಆದರೆ ಮಸೀದಿ ಮುಂಭಾಗ ಅವಾಚ್ಯ ಪದ ಬಳಸಿ ಒಂದು ಸಮುದಾಯವನ್ನು ನಿಂದಿಸಿ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಸ್ಪಷ್ಟಪಡಿಸಿದ್ದಾರೆ.
ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯೋತ್ಸವದ ವೇಳೆ ಮಸೀದಿ ಮುಂಭಾಗ ಸಾಗಿದ ತಂಡವು, ಮುಸ್ಲಿಮರನ್ನು ಪಾಕಿಸ್ಥಾನಿಗಳೆಂದೂ, ಮೋದಿ ಆಗಮನದಿಂದ ಆತಂಕಿತರಾಗಿದ್ದಾರೆ ಮೊದಲಾದ ಅರ್ಥ ಬರುವ ಘೋಷಣೆಗಳನ್ನು ಕೂಗಿದ್ದಾರೆ ಎಂದರು.
ಅಲ್ಲದೇ ಮುಸ್ಲಿಮರ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದಾರೆಂದು ಅವರು ಹೇಳಿದರು. ಈ ಬಗ್ಗೆ ಮಸೀದಿಯ ಅಧ್ಯಕ್ಷರ ದೂರಿನ ಹಿನ್ನೆಲೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಕಮಿಷನರ್ ಹೇಳಿದರು.
ಇನ್ನು ಚೂರಿ ಇರಿತ ಪ್ರಕರಣ ಸಂಬಂಧ 6 ಮಂದಿಯನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…