Featured

ಮಂಗಳೂರು : ಮುಸ್ಲಿಮರ ವಿರುದ್ಧ ನಿಂದನಾತ್ಮಕ ಘೋಷಣೆ ಕೂಗಿದ್ದಕ್ಕೆ ಪ್ರಕರಣ ದಾಖಲು: ಪೊಲೀಸ್ ಕಮಿಷನರ್ ಸ್ಪಷ್ಟನೆ- vishwanews24

ಮಸೀದಿ ಮುಂದೆ ಮುಸ್ಲಿಮರ ವಿರುದ್ಧ ನಿಂದನಾತ್ಮಕ ಘೋಷಣೆ ಕೂಗಿದ್ದಕ್ಕೆ ಪ್ರಕರಣ ದಾಖಲು: ಪೊಲೀಸ್ ಕಮಿಷನರ್ ಸ್ಪಷ್ಟನೆ

ಮಂಗಳೂರು: ನಗರದ ಹೊರವಲಯದ ಬೋಳಿಯಾರ್‌ನಲ್ಲಿ ವಿಜಯೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದ್ದು, ಭಾರತ್ ಮಾತಾ ಕೀ ಜೈ ಅಂದಿದ್ದಕ್ಕೆ ಎಫ್‌ಐ‌ಆರ್ ದಾಖಲಿಸಲಾಗಿದೆಯೆಂದು ಗುಮಾನಿ ಹಬ್ಬಿಸಲಾಗಿದೆ. ಆದರೆ ಮಸೀದಿ ಮುಂಭಾಗ ಅವಾಚ್ಯ ಪದ ಬಳಸಿ ಒಂದು ಸಮುದಾಯವನ್ನು ನಿಂದಿಸಿ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಸ್ಪಷ್ಟಪಡಿಸಿದ್ದಾರೆ.

ಕಮಿಷನರ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯೋತ್ಸವದ ವೇಳೆ ಮಸೀದಿ ಮುಂಭಾಗ ಸಾಗಿದ ತಂಡವು, ಮುಸ್ಲಿಮರನ್ನು ಪಾಕಿಸ್ಥಾನಿಗಳೆಂದೂ, ಮೋದಿ ಆಗಮನದಿಂದ ಆತಂಕಿತರಾಗಿದ್ದಾರೆ ಮೊದಲಾದ ಅರ್ಥ ಬರುವ ಘೋಷಣೆಗಳನ್ನು ಕೂಗಿದ್ದಾರೆ ಎಂದರು.

ಅಲ್ಲದೇ ಮುಸ್ಲಿಮರ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದಾರೆಂದು ಅವರು ಹೇಳಿದರು. ಈ ಬಗ್ಗೆ ಮಸೀದಿಯ ಅಧ್ಯಕ್ಷರ ದೂರಿನ ಹಿನ್ನೆಲೆಯಲ್ಲಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಕಮಿಷನರ್ ಹೇಳಿದರು.

ಇನ್ನು ಚೂರಿ ಇರಿತ ಪ್ರಕರಣ ಸಂಬಂಧ 6 ಮಂದಿಯನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

4 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

4 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

8 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

8 hours ago