Featured

ಮಂಗಳೂರು: ಮೂರು ಮಕ್ಕಳನ್ನು ಬಾವಿಗೆಸೆದು ಕೊಲೆಗೈದ ಪಾಪಿ ತಂದೆಗೆ ಮರಣ ದಂಡನೆ ಶಿಕ್ಷೆ ವಿಧಿಸಿದ ನ್ಯಾಯಲಯ – vishwanews24

ಮಂಗಳೂರು: ಮೂರು ಮಕ್ಕಳನ್ನು ಬಾವಿಗೆಸೆದು ಕೊಲೆಗೈದ ಪಾಪಿ ತಂದೆಗೆ ಮರಣ ದಂಡನೆ ಶಿಕ್ಷೆ ವಿಧಿಸಿದ ನ್ಯಾಯಲಯ

ಮಂಗಳೂರು : ತನ್ನ ಮೂವರು ಮಕ್ಕಳನ್ನು ಬಾವಿಗೆ ದೂಡಿ ಕೊಲೆಗೈದ ಪಾಪಿ ತಂದೆಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮರಣದಂಡನೆ ಶಿಕ್ಷೆ ಘೋಷಿಸಿದೆ.

ಮುಲ್ಕಿ ಠಾಣೆ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಪದ್ಮನೂರು ಎಂಬಲ್ಲಿ 2022ರ ಜೂನ್ 23ರಂದು ಈ ಘಟನೆ ನಡೆದಿತ್ತು.‌ ಆರೋಪಿ ಹಿತೇಶ್ ಶೆಟ್ಟಿಗಾರ್ (36) ಎಂಬಾತನಿಗೆ ಕೋರ್ಟ್ ಗಲ್ಲು ಶಿಕ್ಷೆ ನೀಡಿದೆ.

ಕುಡಿದು ಬಂದು ಪತ್ನಿ ಜೊತೆಗೆ ಜಗಳವಾಡುತ್ತಿದ್ದ ಪತಿ ಹಿತೇಶ್, ಅದೇ ದ್ವೇಷದಲ್ಲಿ ಆಗಷ್ಟೆ ಶಾಲೆಯಿಂದ ಮನೆಗೆ ಬಂದಿದ್ದ ಮಕ್ಕಳಾದ ರಶ್ಮಿತಾ (13), ಉದಯ ಕುಮಾರ್ (11), ದಕ್ಷಿತ್ (5) ಅವರನ್ನು ಬಾವಿಗೆ ದೂಡಿ ಹಾಕಿದ್ದಾನೆ. ಈ ವೇಳೆ, ದೊಡ್ಡ ಮಗಳು ರಶ್ಮಿತಾ ಬಾವಿಗೆ ಅಳವಡಿಸಿದ್ದ ಪಂಪಿನ ಪೈಪ್ ನಲ್ಲಿ ನೇತಾಡಿ ಜೀವ ರಕ್ಷಿಸಲು ಪ್ರಯತ್ನ ಪಟ್ಟಿದ್ದಾಳೆ. ಆದರೆ ಪೈಪನ್ನು ಕತ್ತಿಯಿಂದ ಕಡಿದು ಆಕೆಯನ್ನು ನೀರಿಗೆ ಬೀಳುವಂತೆ ಮಾಡಿ ಅಮಾನುಷ ಕೃತ್ಯ ಎಸಗಿದ್ದ.‌ ಆಬಳಿಕ ಹೊಟೇಲ್ ಕೆಲಸ ಮುಗಿಸಿ ಸಂಜೆ ಮನೆಗೆ ಬಂದ ಪತ್ನಿ ಲಕ್ಷ್ಮೀಯನ್ನೂ ಆರೋಪಿ ಹಿತೇಶ್ ಬಾವಿಗೆ ದೂಡಲು ಯತ್ನಿಸಿದ್ದಾನೆ. ಈ ವೇಳೆ, ಆಕೆ ಬೊಬ್ಬೆ ಹಾಕಿದ್ದು ಸ್ಥಳಕ್ಕೆ ಓಡಿ ಬಂದ ಹೂವಿನ ವ್ಯಾಪಾರಿ ಬಾವಿಯಿಂದ ರಕ್ಷಣೆ ಮಾಡಿದ್ದಾರೆ. ಅಲ್ಲದೆ, ತನ್ನ ಪತಿ ಮಾಡಿದ ಕೃತ್ಯದ ಬಗ್ಗೆ ಪತ್ನಿ ಲಕ್ಷ್ಮೀ ಮುಲ್ಕಿ ಪೊಲೀಸರಿಗೆ ದೂರು ನೀಡಿದ್ದು ಆರೋಪಿಯನ್ನು ಬಂಧಿಸಿದ್ದರು. ಕೃತ್ಯದ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಕುಸುಮಾಧರ್ ಅವರು ಕೋರ್ಟಿಗೆ ದೋಷಾರೋಪ ಸಲ್ಲಿಸಿದ್ದರು.‌

ಸರ್ಕಾರದ ಪರವಾಗಿ ಮೋಹನ್ ಕುಮಾರ್ ವಾದ ಮಂಡಿಸಿದ್ದರು. ವಿಚಾರಣೆ ಬಳಿಕ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಸಂಧ್ಯಾ ಅವರು ಡಿಸೆಂಬರ್ 31ರಂದು ಶಿಕ್ಷೆ ಘೋಷಣೆ ಮಾಡಿದ್ದು ಆರೋಪಿಯ ಅಮಾನುಷ ಕೃತ್ಯಕ್ಕಾಗಿ ಗಲ್ಲು ಶಿಕ್ಷೆ ವಿಧಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

23 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago