ಮಂಗಳೂರು: ಕಾರು ಚಾಲಕನೊಬ್ಬ ಆಂಬುಲೆನ್ಸ್ಗೆ ಸುಮಾರು 40 ಕಿ.ಮೀ. ವರೆಗೂ ದಾರಿ ಬಿಡದೆ ಪುಂಡಾಟ ಮೆರೆದಿದ್ದಾನೆ.
ನಿನ್ನೆ(ಬುಧವಾರ) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ ಉತ್ತರ ಕನ್ನಡದ ಭಟ್ಕಳಕ್ಕೆ ರೋಗಿಯನ್ನು ಕರೆದುಕೊಂಡು ಆಂಬುಲೆನ್ಸ್ ಹೋಗುತ್ತಿತ್ತು.
ಈ ವೇಳೆ KA19 MD6843 ನಂಬರ್ ಪ್ಲೇಟ್ ಹಾಕಿದ್ದ ಕಾರು ಚಾಲಕನೊಬ್ಬ ಆಂಬುಲೆನ್ಸ್ಗೆ ದಾರಿ ಬಿಡದೆ ಸತಾಯಿಸಿದ್ದಾನೆ. ಮೂಲ್ಕಿಯಿಂದ ಉಡುಪಿವರೆಗೂ ಆಂಬುಲೆನ್ಸ್ ಮುಂದೆಯೇ ಸಂಚರಿಸುತ್ತಾ ದಾರಿ ಬಿಡದೆ ಉದ್ಧಟತನ ಪ್ರದರ್ಶಿಸಿದ್ದಾನೆ.
ಅಷ್ಟೇ ಅಲ್ಲ, ಅಂದು ರಾತ್ರಿ ಮಣಿಪಾಲದಿಂದ ಮಂಗಳೂರಿಗೆ ಬರುತ್ತಿದ್ದ ಮತ್ತೊಂದು ಆಂಬುಲೆನ್ಸ್ಗೂ ಇದೇ ಕಾರು ಅಡ್ಡ ಬಂದು ತೊಂದರೆ ಕೊಟ್ಟಿದೆ.
ಆಂಬುಲೆನ್ಸ್ಗಳಿಗೆ ದಾರಿ ಬಿಡುವ ಮೂಲಕ ಅಪಾಯದಲ್ಲಿರುವವರ ಪ್ರಾಣ ಉಳಿವಿಗೆ ನೆರವಾಗುವುದು ಪ್ರತಿಯೊಬ್ಬರ ಜವಾಬ್ದಾರಿ. ಟ್ರಾಫಿಕ್ ಪೊಲೀಸರು ಕೂಡ ಆಂಬುಲೆನ್ಸ್ನ ಸುಗಮ ಸಂಚಾರಕ್ಕೆ ಮೊದಲ ಪ್ರಾಶಸ್ತ್ಯ ನೀಡುತ್ತಾ ಪದೇಪದೆ ಅರಿವು ಮೂಡಿಸುತ್ತಿದ್ದಾರೆ. ಆದರೆ, ಈ ಕಾರು ಚಾಲಕ ಮಾತ್ರ ಅಮಾನವೀಯವಾಗಿ ವರ್ತಿಸುತ್ತಾ ಪುಂಡಾಟ ಮೆರೆದಿದ್ದಾನೆ. ಈ ಕಾರು ಚಾಲಕನ ವರ್ತನೆಯನ್ನ ಆಂಬುಲೆನ್ಸ್ ಸಿಬ್ಬಂದಿಯೇ ವಿಡಿಯೋ ಮಾಡಿದ್ದಾರೆ. ಈ ದೃಶ್ಯ ವೈರಲ್ ಆಗಿದ್ದು, ತಪ್ಪಿತಸ್ಥನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…