ಮಂಗಳೂರು: ಕಾರು ಚಾಲಕನೊಬ್ಬ ಆಂಬುಲೆನ್ಸ್ಗೆ ಸುಮಾರು 40 ಕಿ.ಮೀ. ವರೆಗೂ ದಾರಿ ಬಿಡದೆ ಪುಂಡಾಟ ಮೆರೆದಿದ್ದಾನೆ.
ನಿನ್ನೆ(ಬುಧವಾರ) ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ ಉತ್ತರ ಕನ್ನಡದ ಭಟ್ಕಳಕ್ಕೆ ರೋಗಿಯನ್ನು ಕರೆದುಕೊಂಡು ಆಂಬುಲೆನ್ಸ್ ಹೋಗುತ್ತಿತ್ತು.
ಈ ವೇಳೆ KA19 MD6843 ನಂಬರ್ ಪ್ಲೇಟ್ ಹಾಕಿದ್ದ ಕಾರು ಚಾಲಕನೊಬ್ಬ ಆಂಬುಲೆನ್ಸ್ಗೆ ದಾರಿ ಬಿಡದೆ ಸತಾಯಿಸಿದ್ದಾನೆ. ಮೂಲ್ಕಿಯಿಂದ ಉಡುಪಿವರೆಗೂ ಆಂಬುಲೆನ್ಸ್ ಮುಂದೆಯೇ ಸಂಚರಿಸುತ್ತಾ ದಾರಿ ಬಿಡದೆ ಉದ್ಧಟತನ ಪ್ರದರ್ಶಿಸಿದ್ದಾನೆ.
ಅಷ್ಟೇ ಅಲ್ಲ, ಅಂದು ರಾತ್ರಿ ಮಣಿಪಾಲದಿಂದ ಮಂಗಳೂರಿಗೆ ಬರುತ್ತಿದ್ದ ಮತ್ತೊಂದು ಆಂಬುಲೆನ್ಸ್ಗೂ ಇದೇ ಕಾರು ಅಡ್ಡ ಬಂದು ತೊಂದರೆ ಕೊಟ್ಟಿದೆ.
ಆಂಬುಲೆನ್ಸ್ಗಳಿಗೆ ದಾರಿ ಬಿಡುವ ಮೂಲಕ ಅಪಾಯದಲ್ಲಿರುವವರ ಪ್ರಾಣ ಉಳಿವಿಗೆ ನೆರವಾಗುವುದು ಪ್ರತಿಯೊಬ್ಬರ ಜವಾಬ್ದಾರಿ. ಟ್ರಾಫಿಕ್ ಪೊಲೀಸರು ಕೂಡ ಆಂಬುಲೆನ್ಸ್ನ ಸುಗಮ ಸಂಚಾರಕ್ಕೆ ಮೊದಲ ಪ್ರಾಶಸ್ತ್ಯ ನೀಡುತ್ತಾ ಪದೇಪದೆ ಅರಿವು ಮೂಡಿಸುತ್ತಿದ್ದಾರೆ. ಆದರೆ, ಈ ಕಾರು ಚಾಲಕ ಮಾತ್ರ ಅಮಾನವೀಯವಾಗಿ ವರ್ತಿಸುತ್ತಾ ಪುಂಡಾಟ ಮೆರೆದಿದ್ದಾನೆ. ಈ ಕಾರು ಚಾಲಕನ ವರ್ತನೆಯನ್ನ ಆಂಬುಲೆನ್ಸ್ ಸಿಬ್ಬಂದಿಯೇ ವಿಡಿಯೋ ಮಾಡಿದ್ದಾರೆ. ಈ ದೃಶ್ಯ ವೈರಲ್ ಆಗಿದ್ದು, ತಪ್ಪಿತಸ್ಥನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…