ಮಂಗಳೂರು : ಆಸ್ಪತ್ರೆಯಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಆಯಂಬುಲೆನ್ಸ್ನಲ್ಲಿ ಕೊಂಡೊಯ್ಯುತ್ತಿದ್ದಾಗ ಆತ ಕಣ್ಣು ಬಿಟ್ಟು ಉಸಿರಾಡಿದ ಘಟನೆ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ವಾಂತಿಚ್ಚಾಲ್ ನಿವಾಸಿ ಗುರುವ (60) ಎಂಬವರನ್ನು ವಯೋಸಹಜ ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗಿಗೆ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿತ್ತು. ರೋಗಿಯು ಆಕ್ಸಿಜನ್ ಸಹಾಯದಿಂದ ಉಸಿರಾಟ ನಡೆಯುತ್ತಿರುವುದರಿಂದ ಆಕ್ಸಿಜನ್ ತೆಗೆದರೆ ಅವರು ಸಾವನ್ನಪ್ಪುತ್ತಾರೆ ಎಂದು ಸಂಬಂಧಿಕರಿಗೆ ತಿಳಿಸಲಾಗಿತ್ತು.
ಅವರು ಬದುಕುವ ಸಾಧ್ಯತೆ ಇಲ್ಲದಿರುವುದರಿಂದ ಆಕ್ಸಿಜನ್ ತೆರವು ಮಾಡಲು ಸಂಬಂಧಿಕರು ತಿಳಿಸಿದಂತೆ ಆಕ್ಸಿಜನ್ ತೆರವು ಮಾಡಲಾಗಿತ್ತು. ಆಕ್ಸಿಜನ್ ತೆಗೆದ ಬಳಿಕ ಮೃತಪಟ್ಟಿದ್ದಾರೆ ಎಂದು ಅವರನ್ನು ಆಯಂಬುಲೆನ್ಸ್ನಲ್ಲಿ ಮನೆಗೆ ಕೊಂಡೊಯ್ಯಲಾಗಿತ್ತು. ಅಂತ್ಯಸಂಸ್ಕಾರಕ್ಕೆ ಚಿತೆ ಸಿದ್ಧ ಮಾಡಲು ಕೂಡ ಸೂಚಿಸಲಾಗಿತ್ತು.
ಆದರೆ, ಆಯಂಬುಲೆನ್ಸ್ನಲ್ಲಿ ಹೋಗುತ್ತಿರುವಾಗ ಕಾಸರಗೋಡು ಜಿಲ್ಲೆಯ ಉಪ್ಪಳ ಎಂಬಲ್ಲಿ ಗುರುವ ಅವರ ದೇಹದಲ್ಲಿ ಚಲನೆ ಕಂಡು ಬಂದಿದೆ. ಕಣ್ಣುಬಿಟ್ಟ ಅವರು ಉಸಿರಾಟ ಆರಂಭಿಸಿದ್ದರು. ಕೂಡಲೇ ಅವರನ್ನು ಬದಿಯಡ್ಕದ ಕ್ಲಿನಿಕ್ಗೆ ಕರೆದೊಯ್ದಾಗ ಆತ ಜೀವಂತವಾಗಿರುವ ಬಗ್ಗೆ ವೈದ್ಯರು ತಿಳಿಸಿದ್ದರು. ಬಳಿಕ ಅವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…