ಮಂಗಳೂರು : ಆಸ್ಪತ್ರೆಯಲ್ಲಿ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಆಯಂಬುಲೆನ್ಸ್ನಲ್ಲಿ ಕೊಂಡೊಯ್ಯುತ್ತಿದ್ದಾಗ ಆತ ಕಣ್ಣು ಬಿಟ್ಟು ಉಸಿರಾಡಿದ ಘಟನೆ ನಡೆದಿದೆ.
ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದ ವಾಂತಿಚ್ಚಾಲ್ ನಿವಾಸಿ ಗುರುವ (60) ಎಂಬವರನ್ನು ವಯೋಸಹಜ ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗಿಗೆ ಆಕ್ಸಿಜನ್ ವ್ಯವಸ್ಥೆ ಕಲ್ಪಿಸಲಾಗಿತ್ತು. ರೋಗಿಯು ಆಕ್ಸಿಜನ್ ಸಹಾಯದಿಂದ ಉಸಿರಾಟ ನಡೆಯುತ್ತಿರುವುದರಿಂದ ಆಕ್ಸಿಜನ್ ತೆಗೆದರೆ ಅವರು ಸಾವನ್ನಪ್ಪುತ್ತಾರೆ ಎಂದು ಸಂಬಂಧಿಕರಿಗೆ ತಿಳಿಸಲಾಗಿತ್ತು.
ಅವರು ಬದುಕುವ ಸಾಧ್ಯತೆ ಇಲ್ಲದಿರುವುದರಿಂದ ಆಕ್ಸಿಜನ್ ತೆರವು ಮಾಡಲು ಸಂಬಂಧಿಕರು ತಿಳಿಸಿದಂತೆ ಆಕ್ಸಿಜನ್ ತೆರವು ಮಾಡಲಾಗಿತ್ತು. ಆಕ್ಸಿಜನ್ ತೆಗೆದ ಬಳಿಕ ಮೃತಪಟ್ಟಿದ್ದಾರೆ ಎಂದು ಅವರನ್ನು ಆಯಂಬುಲೆನ್ಸ್ನಲ್ಲಿ ಮನೆಗೆ ಕೊಂಡೊಯ್ಯಲಾಗಿತ್ತು. ಅಂತ್ಯಸಂಸ್ಕಾರಕ್ಕೆ ಚಿತೆ ಸಿದ್ಧ ಮಾಡಲು ಕೂಡ ಸೂಚಿಸಲಾಗಿತ್ತು.
ಆದರೆ, ಆಯಂಬುಲೆನ್ಸ್ನಲ್ಲಿ ಹೋಗುತ್ತಿರುವಾಗ ಕಾಸರಗೋಡು ಜಿಲ್ಲೆಯ ಉಪ್ಪಳ ಎಂಬಲ್ಲಿ ಗುರುವ ಅವರ ದೇಹದಲ್ಲಿ ಚಲನೆ ಕಂಡು ಬಂದಿದೆ. ಕಣ್ಣುಬಿಟ್ಟ ಅವರು ಉಸಿರಾಟ ಆರಂಭಿಸಿದ್ದರು. ಕೂಡಲೇ ಅವರನ್ನು ಬದಿಯಡ್ಕದ ಕ್ಲಿನಿಕ್ಗೆ ಕರೆದೊಯ್ದಾಗ ಆತ ಜೀವಂತವಾಗಿರುವ ಬಗ್ಗೆ ವೈದ್ಯರು ತಿಳಿಸಿದ್ದರು. ಬಳಿಕ ಅವರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…