ಮಂಗಳೂರು: ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಪ್ರಧಾನಿ ಮೋದಿಗೆ ಸಚಿವ ದಿನೇಶ್ ಗುಂಡೂರಾವ್ ಮನವಿ ಸಲ್ಲಿಸಿದರು.
ಇಂದು (ನ.28) ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡುವ ಹಿನ್ನೆಲೆ ಮಂಗಳೂರಿಗೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಅವರನ್ನು ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಪರವಾಗಿ ಮೆಕ್ಕೆಜೋಳ, ಹೆಸರುಕಾಳಿಗೆ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡುವಂತೆ ಮನವಿ ಸಲ್ಲಿಸಿದರು.
ಈ ಕುರಿತು ಸಚಿವ ದಿನೇಶ್ ಗುಂಡರಾವ್ ಪೋಸ್ಟ್ ಹಂಚಿಕೊಂಡಿದ್ದು, ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಬೆಂಬಲ ಬೆಲೆಯಂತೆ ಬೆಳೆ ಖರೀದಿ ವ್ಯವಸ್ಥೆ ನಿರ್ಮಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಿಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…