ಮಂಗಳೂರು: ನಗರದ ಖಾಸಗಿ ವೈದ್ಯಕೀಯ ಕಾಲೇಜಿನ ಹೆಸರಿನಲ್ಲಿ ಮೆಡಿಕಲ್ ಸೀಟು ಕೊಡಿಸುವುದಾಗಿ ಹೇಳಿ ಮೋಸ ಮಾಡಿದ್ದ ಪ್ರಕರಣದಲ್ಲಿ ಆರೋಪಿ ನೋಯ್ಡಾ ಮೂಲದ ಆರೋಪಿಯನ್ನು ಮಹಾರಾಷ್ಟ್ರದ ಪೊಲೀಸರು ಮುಂಬೈನ ನೆರೋಲ್ ನಲಲ್ಲಿ ಬಂಧಿಸಿ ಉಳ್ಳಾಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಬಂಧಿತನನ್ನು ಇಫ್ತಿಕರ್ ಅಹ್ಮದ್ (31) ಉತ್ತರ ಪ್ರದೇಶದ ನೋಯ್ಡಾ ನಿವಾಸಿಯೆಂದು ಗುರುತಿಸಲಾಗಿದೆ.
ಬೀದರ್ ಮೂಲದ ವ್ಯಕ್ತಿಯೋರ್ವರು, ತಮ್ಮಿಂದ 22.5 ಲಕ್ಷ ರೂ. ಪಡೆದು ಖಾಸಗಿ ಮೆಡಿಕಲ್ ಕಾಲೇಜಿನಲ್ಲಿ ಸೀಟು ದೊರಕಿಸುವುದಾಗಿ ನಂಬಿಸಿ ಇಫ್ತಿಕರ್ ಅಹ್ಮದ್ ಹಾಗೂ ಮತ್ತಿತರರು ಸೇರಿ ಮೋಸ ಮಾಡಿದ್ದಾಗಿ ಉಳ್ಳಾಲ ಠಾಣೆಗೆ ದೂರು ನೀಡಿದ್ದರು .
ಮಾರ್ಚ್ 5ರಂದು ಉಳ್ಳಾಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.ಇದೀಗ ಉಳ್ಳಾಲ ಪೊಲೀಸರು ಆರೋಪಿ ಇಫ್ತಿಕರ್ ಅಹ್ಮದ್ ನನ್ನು ಬಾಡಿ ವಾರೆಂಟ್ ಪಡೆದು ಮುಂಬೈನಿಂದ ಮಂಗಳೂರಿಗೆ ಕರೆ ತಂದಿದ್ದಾರೆ. ಈತ ದೇಶಾದ್ಯಂತ ಮೆಡಿಕಲ್ ಸೀಟು ಲಾಬಿಯ ನೆಪದಲ್ಲಿ ಅಭ್ಯರ್ಥಿಗಳನ್ನು ಸಂಪರ್ಕಿಸಿ, ಏಜೆನ್ಸಿ ಹೆಸರಲ್ಲಿ ಮೋಸ ಮಾಡಿರುವುದು ತನಿಖೆಯ ವೇಳೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…